ಬೆಂಗಳೂರು: ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ನಾಲ್ಕು ರೈಲುಗಳಿಗೆ ನಂದಿನಿ ಉತ್ಪನ್ನಗಳ ಜಾಹೀರಾತು ಅಳವಡಿಸಲು ಕೆಎಂಎಫ್ ನಿರ್ಧರಿಸಿದೆ.
ಜಾಹೀರಾತು ಅಳವಡಿಸಿರುವ ಮೊದಲ ರೈಲಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ಅವರು ಬುಧವಾರ ಚಾಲನೆ ನೀಡಿದರು. ಬೆಂಗಳೂರಿನಿಂದ ಮೈಸೂರು, ಶಿವಮೊಗ್ಗ ಹಾಗೂ ಧಾರವಾಡಕ್ಕೆ ಈ ರೈಲು ಸಂಚರಿಸುತ್ತದೆ.
ಇದೇ ವೇಳೆ ರೈಲು ನಿಲ್ದಾಣದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಹಾಲಿನ ಉತ್ಪನ್ನಗಳನ್ನು ವಿತರಿಸಲಾಯಿತು. ಕೆಎಂಎಫ್ ಅಧಿಕಾರಿಗಳು ಹಾಜರಿದ್ದರು.