ಮಂಗಳೂರು: ‘10ನೇ ತರಗತಿ ಸಮಾಜವಿಜ್ಞಾನ ಪಠ್ಯಪುಸ್ತಕದಿಂದ ನಾರಾಯಣ ಗುರು ಹಾಗೂ ಪೆರಿಯಾರ್ ವಿಚಾರಗಳನ್ನು ಕೈಬಿಟ್ಟು, ಅವಸರದಲ್ಲಿ ಅದನ್ನು ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದೊಳಗೆ ಸೇರಿಸಿರುವುದು ಗಾಯಕ್ಕೆ ಉಪ್ಪು ಸವರಿದಂತಾಗಿದೆ’ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಬಿಲ್ಲವ ಮುಖಂಡ ಪದ್ಮರಾಜ್ ಆರ್. ಆರೋಪಿಸಿದ್ದಾರೆ.