ಬೊಮ್ಮಾಯಿ ಹೇಳಿದ್ದೇನು: ‘2011–12 ನೇ ಸಾಲಿನಲ್ಲಿ ನ್ಯಾಷನಲ್ ವಾಟರ್ ಮಿಷನ್ ಅಡಿಯಲ್ಲಿ ಅಂದಿನ ಬಿಜೆಪಿ ಸರ್ಕಾರ ಎನ್ಎಲ್ಬಿಸಿ ಆಧುನಿಕ ಯೋಜನೆಗೆ ಅನುಮೋದನೆ ಪಡೆದಿತ್ತು. ಇದು ಬಿಜೆಪಿ ಸರ್ಕಾರದ ಕನಸಿನ ಯೋಜನೆಯಾಗಿತ್ತು. ಆದರೆ, 2014–15 ರವರೆಗೆ ಸಿದ್ದರಾಮಯ್ಯ ಸರ್ಕಾರ, ಕೇಂದ್ರದ ಯುಪಿಎ ಸರ್ಕಾರದಿಂದ ಯಾವುದೇ ಧನ ಸಹಾಯ ಪಡೆಯುವಲ್ಲಿ ವಿಫಲವಾಗಿತ್ತು’ ಎಂದು ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ.