ಇದಕ್ಕೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿರುವ ಕಾಂಗ್ರೆಸ್, 'ಪಕ್ಷಕ್ಕಾಗಿ, ದೇಶಕ್ಕಾಗಿ ಬದುಕು ಸವೆಸಿದ ಖರ್ಗೆ ಅವರಂತಹ ಹಿರಿಯರ ಮಾರ್ಗದರ್ಶನದಲ್ಲಿ ಕಿರಿಯರು ಪಕ್ಷ ಸಂಘಟಿಸುವ ಸಂಸ್ಕೃತಿ ನಮ್ಮಲ್ಲಿದೆ. ನೀವು(ಬಿಜೆಪಿ) ಅಡ್ವಾಣಿ, ಮುರಳಿ ಮನೋಹರ ಜೋಶಿಯವರನ್ನು ಮೂಲೆಗೆ ಕೂರಿಸಿದಂತೆ ನಮ್ಮಲ್ಲಿಲ್ಲ. ಮೋದಿಗೆ ತಾಕತ್ತಿದ್ದರೆ ಒಂದೇ ಒಂದು ಪತ್ರಿಕಾಗೋಷ್ಠಿ ಹಾಗೂ ಟೆಲಿಪ್ರಾಂಪ್ಟರ್ ಇಲ್ಲದೆ ಭಾಷಣ ಮಾಡಲು ಹೇಳಿ' ಎಂದು ತಿರುಗೇಟು ನೀಡಿದೆ.