ಈ ಯಾತ್ರೆಯಲ್ಲಿ ಮೋದಿ ನೇತೃತ್ವದ ಸರ್ಕಾರ ಅನುಷ್ಠಾನಗೊಳಿಸಿದ ಜನಪರ ಯೋಜನೆಗಳನ್ನು ಜನರಿಗೆ ಪರಿಚಯಿಸಲಾಗುವುದು. ದೇಶದಲ್ಲಿ 55 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ನೀಡಲಾಗಿದೆ. ಈ ಯಾತ್ರೆ ಲಸಿಕಾ ಕೇಂದ್ರಗಳು, ಪಡಿತರ ಅಂಗಡಿಗಳು, ಸಾಹಿತಿಗಳು, ಯೋಧರು, ಗಣ್ಯ ವ್ಯಕ್ತಿಗಳು, ಜನಸಂಘ ಮತ್ತು ಬಿಜೆಪಿ ಹಿರಿಯ ನಾಯಕರ ಮನೆಗಳಿಗೂ ಭೇಟಿ ನೀಡಿ ಆಶೀರ್ವಾದ ಪಡೆಯಲಿದ್ದಾರೆ ಎಂದರು.