<p><strong>ಬೆಂಗಳೂರು: </strong>ಸಂಸತ್ ಅಧಿವೇಶನದಲ್ಲಿ ಕೇಂದ್ರದ ನೂತನ ಸಚಿವರನ್ನು ಪರಿಚಯಿಸಲು ಪ್ರಧಾನಿಯವರಿಗೆ ಅವಕಾಶ ನೀಡದೆ ಕಾಂಗ್ರೆಸ್ ಅಡ್ಡಿಪಡಿಸಿದ್ದರಿಂದ ನೂತನ ಸಚಿವರನ್ನು ಜನರಿಗೆ ಪರಿಚಯಿಸಲು ಇದೇ 16 ರಿಂದ ರಾಜ್ಯದಲ್ಲೂ ‘ಜನಾಶೀರ್ವಾದ ಯಾತ್ರೆ’ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ತಿಳಿಸಿದರು.</p>.<p>ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಒಟ್ಟು ನಾಲ್ಕು ತಂಡಗಳಲ್ಲಿ ಯಾತ್ರೆ ಸಂಚರಿಸಲಿದೆ ಎಂದರು.</p>.<p>ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್ ಮತ್ತು ಭಗವಂತ ಖೂಬಾ ಅವರ ನೇತೃತದಲ್ಲಿ ಈ ತಂಡಗಳು ಪ್ರವಾಸ ಮಾಡಲಿವೆ. ದೇಶದಲ್ಲಿ ಒಟ್ಟು 160 ದಿನ ವಿವಿಧ ತಂಡಗಳು ಪ್ರವಾಸ ಮಾಡಲಿವೆ. ರಾಜ್ಯದಲ್ಲಿ 5 ದಿನಗಳ ಪ್ರವಾಸದಲ್ಲಿ 2,030 ಕಿ.ಮೀ ದೂರವನ್ನು ಕ್ರಮಿಸಲಿವೆ. 24 ಲೋಕಸಭಾ ಕ್ಷೇತ್ರಗಳು, 72 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು161 ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ಈ ಯಾತ್ರೆಯಲ್ಲಿ ಮೋದಿ ನೇತೃತ್ವದ ಸರ್ಕಾರ ಅನುಷ್ಠಾನಗೊಳಿಸಿದ ಜನಪರ ಯೋಜನೆಗಳನ್ನು ಜನರಿಗೆ ಪರಿಚಯಿಸಲಾಗುವುದು. ದೇಶದಲ್ಲಿ 55 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ನೀಡಲಾಗಿದೆ. ಈ ಯಾತ್ರೆ ಲಸಿಕಾ ಕೇಂದ್ರಗಳು, ಪಡಿತರ ಅಂಗಡಿಗಳು, ಸಾಹಿತಿಗಳು, ಯೋಧರು, ಗಣ್ಯ ವ್ಯಕ್ತಿಗಳು, ಜನಸಂಘ ಮತ್ತು ಬಿಜೆಪಿ ಹಿರಿಯ ನಾಯಕರ ಮನೆಗಳಿಗೂ ಭೇಟಿ ನೀಡಿ ಆಶೀರ್ವಾದ ಪಡೆಯಲಿದ್ದಾರೆ ಎಂದರು.</p>.<p>ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಿ ಕಾರ್ಯಕ್ರಮಗಳನ್ನು ರೂಪಿಸಲಾಗುವು ಎಂದೂ ಸಿದ್ದರಾಜು ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/district/chikkamagaluru/indira-canteens-ct-ravi-indira-gandhi-jawaharlal-nehru-congress-bjp-politics-857403.html" target="_blank">‘ನೆಹರೂ ಹುಕ್ಕಾ ಸೇದುತ್ತಿದ್ದು ತಪ್ಪೋ, ಸಿ.ಟಿ.ರವಿ ಹೇಳಿದ್ದು ತಪ್ಪೋ?’</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಂಸತ್ ಅಧಿವೇಶನದಲ್ಲಿ ಕೇಂದ್ರದ ನೂತನ ಸಚಿವರನ್ನು ಪರಿಚಯಿಸಲು ಪ್ರಧಾನಿಯವರಿಗೆ ಅವಕಾಶ ನೀಡದೆ ಕಾಂಗ್ರೆಸ್ ಅಡ್ಡಿಪಡಿಸಿದ್ದರಿಂದ ನೂತನ ಸಚಿವರನ್ನು ಜನರಿಗೆ ಪರಿಚಯಿಸಲು ಇದೇ 16 ರಿಂದ ರಾಜ್ಯದಲ್ಲೂ ‘ಜನಾಶೀರ್ವಾದ ಯಾತ್ರೆ’ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ತಿಳಿಸಿದರು.</p>.<p>ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಒಟ್ಟು ನಾಲ್ಕು ತಂಡಗಳಲ್ಲಿ ಯಾತ್ರೆ ಸಂಚರಿಸಲಿದೆ ಎಂದರು.</p>.<p>ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್ ಮತ್ತು ಭಗವಂತ ಖೂಬಾ ಅವರ ನೇತೃತದಲ್ಲಿ ಈ ತಂಡಗಳು ಪ್ರವಾಸ ಮಾಡಲಿವೆ. ದೇಶದಲ್ಲಿ ಒಟ್ಟು 160 ದಿನ ವಿವಿಧ ತಂಡಗಳು ಪ್ರವಾಸ ಮಾಡಲಿವೆ. ರಾಜ್ಯದಲ್ಲಿ 5 ದಿನಗಳ ಪ್ರವಾಸದಲ್ಲಿ 2,030 ಕಿ.ಮೀ ದೂರವನ್ನು ಕ್ರಮಿಸಲಿವೆ. 24 ಲೋಕಸಭಾ ಕ್ಷೇತ್ರಗಳು, 72 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು161 ಕಾರ್ಯಕ್ರಮ ಆಯೋಜಿಸಲಾಗಿದೆ.</p>.<p>ಈ ಯಾತ್ರೆಯಲ್ಲಿ ಮೋದಿ ನೇತೃತ್ವದ ಸರ್ಕಾರ ಅನುಷ್ಠಾನಗೊಳಿಸಿದ ಜನಪರ ಯೋಜನೆಗಳನ್ನು ಜನರಿಗೆ ಪರಿಚಯಿಸಲಾಗುವುದು. ದೇಶದಲ್ಲಿ 55 ಕೋಟಿಗೂ ಹೆಚ್ಚು ಕೋವಿಡ್ ಲಸಿಕೆ ನೀಡಲಾಗಿದೆ. ಈ ಯಾತ್ರೆ ಲಸಿಕಾ ಕೇಂದ್ರಗಳು, ಪಡಿತರ ಅಂಗಡಿಗಳು, ಸಾಹಿತಿಗಳು, ಯೋಧರು, ಗಣ್ಯ ವ್ಯಕ್ತಿಗಳು, ಜನಸಂಘ ಮತ್ತು ಬಿಜೆಪಿ ಹಿರಿಯ ನಾಯಕರ ಮನೆಗಳಿಗೂ ಭೇಟಿ ನೀಡಿ ಆಶೀರ್ವಾದ ಪಡೆಯಲಿದ್ದಾರೆ ಎಂದರು.</p>.<p>ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಿ ಕಾರ್ಯಕ್ರಮಗಳನ್ನು ರೂಪಿಸಲಾಗುವು ಎಂದೂ ಸಿದ್ದರಾಜು ತಿಳಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/district/chikkamagaluru/indira-canteens-ct-ravi-indira-gandhi-jawaharlal-nehru-congress-bjp-politics-857403.html" target="_blank">‘ನೆಹರೂ ಹುಕ್ಕಾ ಸೇದುತ್ತಿದ್ದು ತಪ್ಪೋ, ಸಿ.ಟಿ.ರವಿ ಹೇಳಿದ್ದು ತಪ್ಪೋ?’</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>