ಬೆಂಗಳೂರು: ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಅಧಿಕಾರ ಹಿಡಿದ ಪ್ರಧಾನಿ ಮೋದಿಯವರು ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ ಎಂದು ಕಾಂಗ್ರೆಸ್ ಟೀಕಿಸಿದೆ.
ಈ ಕುರಿತು ಶುಕ್ರವಾರ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, 'ದುಡಿಯಲಾರದ ಸೋಂಬೇರಿತನದಲ್ಲಿ ಸ್ವಾಭಿಮಾನ ಮರೆತು ಮೋದಿ ಭಿಕ್ಷೆ ಬೇಡಿರಬಹುದು, ಆದರೆ ದೇಶದ ಸ್ವಾಭಿಮಾನಿ ಯುವಜನತೆ ಭಿಕ್ಷೆ ಬೇಡಲಾರರು' ಎಂದು ವಾಗ್ದಾಳಿ ನಡೆಸಿದೆ.
ಬದುಕಲು ಜನತೆಗೆ ಉದ್ಯೋಗ ಬೇಕಿದೆ ಎಂದಿರುವ ಕಾಂಗ್ರೆಸ್ #NationalUnemploymentDay ಎಂಬ ಹ್ಯಾಶ್ಟ್ಯಾಗ್ ಬಳಸಿ ಟ್ವೀಟ್ ಮಾಡಿದೆ.
ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದು ಅಧಿಕಾರ ಹಿಡಿದ ಪ್ರಧಾನಿ ಮೋದಿಯವರು ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ.
ತಾವೇನೋ ದುಡಿಯಲಾರದ ಸೋಂಬೇರಿತನದಲ್ಲಿ ಸ್ವಾಭಿಮಾನ ಮರೆತು ಭಿಕ್ಷೆ ಬೇಡಿರಬಹುದು, ಆದರೆ ದೇಶದ ಸ್ವಾಭಿಮಾನಿ ಯುವಜನತೆ ಭಿಕ್ಷೆ ಬೇಡಲಾರರು!