ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಟ್ಯಾಗ್ ಮಾಡಿ, ವಿಡಿಯೊ ತುಣುಕೊಂದನ್ನು ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್, 'ಕೋಮು ಸೌಹಾರ್ದಕ್ಕೆ ದಕ್ಕೆ ತರುವ ಉದ್ದೇಶದಿಂದ ಪ್ರಚೋದನಾಕಾರಿ ಹೇಳಿಕೆಗಳನ್ನು ಸಚಿವ ಈಶ್ವರಪ್ಪ ನೀಡಿದ್ದಾರೆ. ಅವರನ್ನು ವಜಾಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸೂಚಿಸಬೇಕೆಂದು ಪ್ರಧಾನಿ ಮೋದಿಯವರನ್ನು ನಾನು ಒತ್ತಾಯಿಸುತ್ತೇನೆ' ಎಂದಿದ್ದಾರೆ.