<p><strong>ಬೆಂಗಳೂರು:</strong> ವಿಧಾನಪರಿಷತ್ ಸಭಾಪತಿ ಆಯ್ಕೆಗೆ ಮಂಗಳವಾರ (ಫೆ. 9) ಚುನಾವಣೆ ನಡೆಯಲಿದ್ದು, ನಸೀರ್ ಅಹ್ಮದ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ.</p>.<p>ಸಭಾಪತಿಯಾಗಿದ್ದ ಪ್ರತಾಪಚಂದ್ರ ಶೆಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಸೋಮವಾರ (ಫೆ. 8) ಬೆಳಿಗ್ಗೆ 12 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕು.</p>.<p>ಬಹುತೇಕ ಸಂದರ್ಭಗಳಲ್ಲಿ ಸಭಾಪತಿ ಸ್ಥಾನಕ್ಕೆ ಅವಿರೋಧ ಆಯ್ಕೆ ಮಾಡುವುದು ಸಂಪ್ರದಾಯ. ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪ್ರತಾಪಚಂದ್ರಶೆಟ್ಟಿ ಅವರನ್ನು ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಆಯ್ಕೆ ಮಾಡಿಕೊಂಡರೆ, ಎಸ್.ಎಲ್. ಧರ್ಮೇಗೌಡ ಅವರನ್ನು ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಆಯ್ಕೆ ಮಾಡಿತ್ತು.</p>.<p>ಈ ಮಧ್ಯೆ, ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ತೆರವಾದ ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡು ಬಿಜೆಪಿಯ ಎಂ.ಕೆ. ಪ್ರಾಣೇಶ್ ಆಯ್ಕೆಯಾಗಿದ್ದರು. ಸಭಾಪತಿ ಸ್ಥಾನಕ್ಕೆ ಬಿಜೆಪಿ ಬೆಂಬಲದಲ್ಲಿ ಜೆಡಿಎಸ್ನ ಬಸವರಾಜ ಹೊರಟ್ಟಿ ಆಯ್ಕೆ ಖಚಿತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನಪರಿಷತ್ ಸಭಾಪತಿ ಆಯ್ಕೆಗೆ ಮಂಗಳವಾರ (ಫೆ. 9) ಚುನಾವಣೆ ನಡೆಯಲಿದ್ದು, ನಸೀರ್ ಅಹ್ಮದ್ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ.</p>.<p>ಸಭಾಪತಿಯಾಗಿದ್ದ ಪ್ರತಾಪಚಂದ್ರ ಶೆಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಸೋಮವಾರ (ಫೆ. 8) ಬೆಳಿಗ್ಗೆ 12 ಗಂಟೆಯೊಳಗೆ ನಾಮಪತ್ರ ಸಲ್ಲಿಸಬೇಕು.</p>.<p>ಬಹುತೇಕ ಸಂದರ್ಭಗಳಲ್ಲಿ ಸಭಾಪತಿ ಸ್ಥಾನಕ್ಕೆ ಅವಿರೋಧ ಆಯ್ಕೆ ಮಾಡುವುದು ಸಂಪ್ರದಾಯ. ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪ್ರತಾಪಚಂದ್ರಶೆಟ್ಟಿ ಅವರನ್ನು ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ಆಯ್ಕೆ ಮಾಡಿಕೊಂಡರೆ, ಎಸ್.ಎಲ್. ಧರ್ಮೇಗೌಡ ಅವರನ್ನು ಉಪ ಸಭಾಪತಿ ಸ್ಥಾನಕ್ಕೆ ಜೆಡಿಎಸ್ ಆಯ್ಕೆ ಮಾಡಿತ್ತು.</p>.<p>ಈ ಮಧ್ಯೆ, ಧರ್ಮೇಗೌಡ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ತೆರವಾದ ಉಪಸಭಾಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡು ಬಿಜೆಪಿಯ ಎಂ.ಕೆ. ಪ್ರಾಣೇಶ್ ಆಯ್ಕೆಯಾಗಿದ್ದರು. ಸಭಾಪತಿ ಸ್ಥಾನಕ್ಕೆ ಬಿಜೆಪಿ ಬೆಂಬಲದಲ್ಲಿ ಜೆಡಿಎಸ್ನ ಬಸವರಾಜ ಹೊರಟ್ಟಿ ಆಯ್ಕೆ ಖಚಿತವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>