ಕೆಲವರ ಹಿತಾಸಕ್ತಿ, ಪ್ರತಿಷ್ಠೆಯಿಂದ ಹೊಸ ಪಠ್ಯಕ್ರಮದಲ್ಲಿ ಈ ತರಹದ ಗೊಂದಲದ ಮಾರ್ಪಾಡುಗಳು ಆಗಿವೆ. ಇದರಿಂದ ವಿದ್ಯಾರ್ಥಿಗಳ ಕಲಿಕೆಗೆ ಪೆಟ್ಟು ಬೀಳಲಿದೆ. ಪರಿಣಿತರು ಆಮೂಲಾಗ್ರ ಚರ್ಚೆ ನಡೆಸದೇ ಆತುರದ ನಿರ್ಧಾರ ಕೈಗೊಂಡಿದ್ದು ಸರಿಯಲ್ಲ. ಇದರಿಂದ ಮುಂದಿನ ಪೀಳಿಗೆಗೆ ಅನ್ಯಾಯ ಆಗಲಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉನ್ನತ ಶಿಕ್ಷಣ ಪರಿಷತ್ ಮರುಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.