<p><strong>ಬೆಂಗಳೂರು</strong>: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್ಎಚ್ಎಂ) ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಯ ವೇತನವನ್ನು ಶೇ 5ರಿಂದ ಶೇ 15 ರಷ್ಟು ಹೆಚ್ಚಿಸಲಾಗಿದೆ.</p>.<p>ಈ ಬಗ್ಗೆ ಎನ್ಎಚ್ಎಂ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ. 2020–21ನೇ ಸಾಲಿನಲ್ಲಿ ₹ 15 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುತ್ತಿದ್ದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ಮೊತ್ತವು ಅನುಮೋದನೆಗೊಂಡಿದೆ. 2021–22ನೇ ಸಾಲಿಗೆ ವಾರ್ಷಿಕ ಸಂಭಾವನೆ ಹೆಚ್ಚಳ ಮಾಡಲು ಅವಕಾಶವಿಲ್ಲ. ಒಂದು ವರ್ಷ ಪೂರೈಸಿದವರಿಗೆ ಶೇ 5ರಷ್ಟು ಹೆಚ್ಚುವರಿ ವೇತನ ನೀಡಲಾಗುವುದು ಎಂದು ತಿಳಿಸಿದ್ದಾರೆ.</p>.<p>2021–22ನೇ ಸಾಲಿಗೆ ಅನ್ವಯವಾಗುವಂತೆ 3 ವರ್ಷ ಸೇವೆ ಪೂರೈಸಿದವರಿಗೆ ಶೇ 10 ರಷ್ಟು ಹಾಗೂ 5 ವರ್ಷ ಪೂರ್ಣಗೊಳಿಸಿದವರಿಗೆ ಶೇ 5 ರಷ್ಟು ಸೇವಾನುಭವ ಭತ್ಯೆಯನ್ನು ನೌಕರರಿಗೆ ಹಂಚಿಕೆ ಮಾಡುವಂತೆ ಸೂಚಿಸಿದ್ದಾರೆ.</p>.<p>ವಿವಿಧ ಯೋಜನೆಗಳಡಿ ಗುತ್ತಿಗೆ ಹಾಗೂ ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಹಾಗೂಇಎಸ್ಐ ಸೌಲಭ್ಯ ನೀಡುವಂತೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್ಎಚ್ಎಂ) ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಯ ವೇತನವನ್ನು ಶೇ 5ರಿಂದ ಶೇ 15 ರಷ್ಟು ಹೆಚ್ಚಿಸಲಾಗಿದೆ.</p>.<p>ಈ ಬಗ್ಗೆ ಎನ್ಎಚ್ಎಂ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ. 2020–21ನೇ ಸಾಲಿನಲ್ಲಿ ₹ 15 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುತ್ತಿದ್ದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ಮೊತ್ತವು ಅನುಮೋದನೆಗೊಂಡಿದೆ. 2021–22ನೇ ಸಾಲಿಗೆ ವಾರ್ಷಿಕ ಸಂಭಾವನೆ ಹೆಚ್ಚಳ ಮಾಡಲು ಅವಕಾಶವಿಲ್ಲ. ಒಂದು ವರ್ಷ ಪೂರೈಸಿದವರಿಗೆ ಶೇ 5ರಷ್ಟು ಹೆಚ್ಚುವರಿ ವೇತನ ನೀಡಲಾಗುವುದು ಎಂದು ತಿಳಿಸಿದ್ದಾರೆ.</p>.<p>2021–22ನೇ ಸಾಲಿಗೆ ಅನ್ವಯವಾಗುವಂತೆ 3 ವರ್ಷ ಸೇವೆ ಪೂರೈಸಿದವರಿಗೆ ಶೇ 10 ರಷ್ಟು ಹಾಗೂ 5 ವರ್ಷ ಪೂರ್ಣಗೊಳಿಸಿದವರಿಗೆ ಶೇ 5 ರಷ್ಟು ಸೇವಾನುಭವ ಭತ್ಯೆಯನ್ನು ನೌಕರರಿಗೆ ಹಂಚಿಕೆ ಮಾಡುವಂತೆ ಸೂಚಿಸಿದ್ದಾರೆ.</p>.<p>ವಿವಿಧ ಯೋಜನೆಗಳಡಿ ಗುತ್ತಿಗೆ ಹಾಗೂ ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಹಾಗೂಇಎಸ್ಐ ಸೌಲಭ್ಯ ನೀಡುವಂತೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>