ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆಕೆಪಿಸಿಸಿ ಅಧ್ಯಕ್ಷಡಿ.ಕೆ. ಶಿವಕುಮಾರ್, ಡಿ.ಕೆ.ಸುರೇಶ್ ಅವರಿಗೆ ಇ.ಡಿ.ಸಮನ್ಸ್ ನೀಡಿತ್ತು. ವಿಚಾರಣೆಗೆ ಹಾಜರಾಗಲು ಮೂರು ವಾರಗಳ ಕಾಲಾವಕಾಶ ನೀಡಬೇಕು ಎಂದು ಶಿವಕುಮಾರ್ ಕೋರಿದ್ದರು. ಹಾಗಾಗಿ, ಅವರು ಸೋಮವಾರ ವಿಚಾರಣೆಗೆ ಹಾಜರಾಗಿಲ್ಲ. ಅವರಿಗೆ ಇ.ಡಿ. ಮತ್ತೆ ಸಮನ್ಸ್ ನೀಡಲಿದೆ.