‘ಇದೇ 30ರಂದು ಮೋದಿ ‘ಕೋವಿನ್ ಗ್ಲೋಬಲ್ ಕಾನ್ಕ್ಲೇವ್’ ನಡೆಸಲು ಉದ್ದೇಶಿಸಿದ್ದಾರೆಂಬ ಮಾಹಿತಿ ಇದೆ. ದೇಶ ಕೋವಿಡ್ ಎದುರಿಸಿದ ರೀತಿಗಳನ್ನು ಈ ಸಮಾವೇಶದಲ್ಲಿ ತಿಳಿಸುವುದಾಗಿ ಹೇಳಿದ್ದಾರೆ. ಇದಂತೂ ಅತ್ಯಂತ ನಾಚಿಕೆಗೇಡಿನ ವಿಷಯ. ತಮ್ಮ ಸಾಧನೆಗಳ ಜಾಗತಿಕ ಸಮಾವೇಶ ನಡೆಸುವ ಬದಲು, ಲಸಿಕೆ ಮೇಲಿನ ಪೇಟೆಂಟುಗಳನ್ನು ತೆಗೆದು ಹಾಕುವಂತೆ ವಿಶ್ವದ ನಾಯಕರ ಮೇಲೆ ಒತ್ತಡಹೇರಬೇಕು’ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.