<p><strong>ಬೆಂಗಳೂರು:</strong> ‘ದಾಳಿಗೂ, ತನಿಖೆಗೂ ವ್ಯತ್ಯಾಸ ಇದೆ. ಪೊಲೀಸರು ದಾಳಿ ನಡೆಸುವ ಮುನ್ನ ನ್ಯಾಯಾಧೀಶರ ಅನುಮತಿ ಪಡೆಯುವ ಅಗತ್ಯವಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಚಿಕ್ಕಮಗಳೂರು ಪೊಲೀಸರ ದಾಳಿ ಮತ್ತು ನಂತರದ ತನಿಖೆ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ಧ ಪೀಠ, ‘ಅಂದರ್–ಬಾಹರ್ ಜೂಜು ನಡೆಯುತ್ತಿರುವ ಬಗ್ಗೆ ಮಾಹಿತಿ ದೊರೆತರೆ ಪೊಲೀಸರು ದಾಳಿ ನಡೆಸಲು ನ್ಯಾಯಾಧೀಶರ ಅನುಮತಿ ಪಡೆಯಬೇಕಿಲ್ಲ’ ಎಂದು ಹೇಳಿದೆ.</p>.<p>ಚಿಕ್ಕಮಗಳೂರಿನ ಹಿರಿಯ ನಾಗರಿಕರ ಸೇವಾ ಕೇಂದ್ರದ ಮೇಲೆ ಫೆಬ್ರುವರಿಯಲ್ಲಿ ದಾಳಿ ನಡೆಸಿದ್ದ ಪೊಲೀಸರು ಅಕ್ರಮ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಒಂಬತ್ತು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದರು.</p>.<p>ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯಲ್ಲಿ ‘ಬಸವನಹಳ್ಳಿ ಪೊಲೀಸರು ₹12,550 ನಗದು ವಶಕ್ಕೆ ಪಡೆದಿದ್ದರು. ನ್ಯಾಯಾಧೀಶರ ಅನುಮತಿ ಪಡೆದ ಬಳಿಕ ಎಫ್ಐಆರ್ ದಾಖಲಿಸಿದ್ದಾರೆ. ಸಿಆರ್ಪಿಸಿ ಸೆಕ್ಷನ್ 155(2) ಪ್ರಕಾರ, ದಾಳಿ ಮತ್ತು ತನಿಖೆ ನಡೆಸುವ ಮೊದಲು ನ್ಯಾಯಾಧೀಶರ ಅನುಮತಿಯನ್ನು ಪೊಲೀಸರು ಪಡೆಯಬೇಕು’ ಎಂದು ಅರ್ಜಿದಾರರು ಹೇಳಿದ್ದಾರೆ.</p>.<p>‘ಎಫ್ಐಆರ್ ದಾಖಲಿಸಲು ಮಾತ್ರ ನ್ಯಾಯಾಧೀಶರ ಅನುಮತಿ ಅಗತ್ಯವಿದೆ. ದಾಳಿ ಮತ್ತು ತನಿಖೆ ಎರಡೂ ಒಂದೇ ಎಂಬ ಅರ್ಜಿದಾರರ ವಾದವನ್ನು ಒಪ್ಪಲು ಆಗುವುದಿಲ್ಲ. ಈ ಪ್ರಕರಣದಲ್ಲಿ ಡಿವೈಎಸ್ಪಿಯಿಂದ ಶೋಧಕ್ಕೆ ವಾರಂಟ್ ಪಡೆದ ಬಳಿಕವೇ ದಾಳಿ ನಡೆಸಿದ್ದಾರೆ. ಅಂದರ್–ಬಾಹರ್ ಜೂಜು ನಡೆಯುತ್ತಿರುವ ಮಾಹಿತಿ ದೊರೆತಾಗ ನ್ಯಾಯಾಧೀಶರ ಅನುಮತಿಗಾಗಿ ಕಾಯಲು ಸಾಧ್ಯವೇ’ ಎಂದು ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ದಾಳಿಗೂ, ತನಿಖೆಗೂ ವ್ಯತ್ಯಾಸ ಇದೆ. ಪೊಲೀಸರು ದಾಳಿ ನಡೆಸುವ ಮುನ್ನ ನ್ಯಾಯಾಧೀಶರ ಅನುಮತಿ ಪಡೆಯುವ ಅಗತ್ಯವಿಲ್ಲ’ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ಚಿಕ್ಕಮಗಳೂರು ಪೊಲೀಸರ ದಾಳಿ ಮತ್ತು ನಂತರದ ತನಿಖೆ ಪ್ರಶ್ನಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ಧ ಪೀಠ, ‘ಅಂದರ್–ಬಾಹರ್ ಜೂಜು ನಡೆಯುತ್ತಿರುವ ಬಗ್ಗೆ ಮಾಹಿತಿ ದೊರೆತರೆ ಪೊಲೀಸರು ದಾಳಿ ನಡೆಸಲು ನ್ಯಾಯಾಧೀಶರ ಅನುಮತಿ ಪಡೆಯಬೇಕಿಲ್ಲ’ ಎಂದು ಹೇಳಿದೆ.</p>.<p>ಚಿಕ್ಕಮಗಳೂರಿನ ಹಿರಿಯ ನಾಗರಿಕರ ಸೇವಾ ಕೇಂದ್ರದ ಮೇಲೆ ಫೆಬ್ರುವರಿಯಲ್ಲಿ ದಾಳಿ ನಡೆಸಿದ್ದ ಪೊಲೀಸರು ಅಕ್ರಮ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ಒಂಬತ್ತು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದರು.</p>.<p>ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯಲ್ಲಿ ‘ಬಸವನಹಳ್ಳಿ ಪೊಲೀಸರು ₹12,550 ನಗದು ವಶಕ್ಕೆ ಪಡೆದಿದ್ದರು. ನ್ಯಾಯಾಧೀಶರ ಅನುಮತಿ ಪಡೆದ ಬಳಿಕ ಎಫ್ಐಆರ್ ದಾಖಲಿಸಿದ್ದಾರೆ. ಸಿಆರ್ಪಿಸಿ ಸೆಕ್ಷನ್ 155(2) ಪ್ರಕಾರ, ದಾಳಿ ಮತ್ತು ತನಿಖೆ ನಡೆಸುವ ಮೊದಲು ನ್ಯಾಯಾಧೀಶರ ಅನುಮತಿಯನ್ನು ಪೊಲೀಸರು ಪಡೆಯಬೇಕು’ ಎಂದು ಅರ್ಜಿದಾರರು ಹೇಳಿದ್ದಾರೆ.</p>.<p>‘ಎಫ್ಐಆರ್ ದಾಖಲಿಸಲು ಮಾತ್ರ ನ್ಯಾಯಾಧೀಶರ ಅನುಮತಿ ಅಗತ್ಯವಿದೆ. ದಾಳಿ ಮತ್ತು ತನಿಖೆ ಎರಡೂ ಒಂದೇ ಎಂಬ ಅರ್ಜಿದಾರರ ವಾದವನ್ನು ಒಪ್ಪಲು ಆಗುವುದಿಲ್ಲ. ಈ ಪ್ರಕರಣದಲ್ಲಿ ಡಿವೈಎಸ್ಪಿಯಿಂದ ಶೋಧಕ್ಕೆ ವಾರಂಟ್ ಪಡೆದ ಬಳಿಕವೇ ದಾಳಿ ನಡೆಸಿದ್ದಾರೆ. ಅಂದರ್–ಬಾಹರ್ ಜೂಜು ನಡೆಯುತ್ತಿರುವ ಮಾಹಿತಿ ದೊರೆತಾಗ ನ್ಯಾಯಾಧೀಶರ ಅನುಮತಿಗಾಗಿ ಕಾಯಲು ಸಾಧ್ಯವೇ’ ಎಂದು ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>