ಯೋಜನೆಯ ಅನುಷ್ಠಾನ ಕೈಗೆತ್ತಿಕೊಳ್ಳಲು ‘ನೀರಿ’ ಸಂಸ್ಥೆಗೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಯಿಂದ ವಿನಾಯಿತಿ ನೀಡಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಜಲಮಂಡಳಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳು ‘ನೀರಿ’ ಸಂಸ್ಥೆಗೆ ಶುಲ್ಕ ಪಾವತಿಸಲಿವೆ ಎಂದು ರಾಜ್ಯ ಸರ್ಕಾರದ ಪರ ವಕೀಲರು ವಿಚಾರಣೆ ವೇಳೆ ತಿಳಿಸಿದರು.