ಬೆಂಗಳೂರು: 2022ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ (ನೀಟ್)ಚೈತನ್ಯ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆರ್.ಕೃಷ್ಣ 8ನೇ ರ್ಯಾಂಕ್ ಪಡೆದಿದ್ದಾರೆ. ಇದೇ ಸಂಸ್ಥೆಯ ವಿದ್ಯಾರ್ಥಿನಿ ಶುಭಾ ಕೌಶಿಕ್ 17ನೇ ಮತ್ತು ಬಿ.ವಿಶಾಲ್ 96ನೇ ರ್ಯಾಂಕ್ ಪಡೆದಿದ್ದಾರೆ.
281, 355, 674, 813, 947ನೇ ರ್ಯಾಂಕ್ಗಳನ್ನು ಇದೇ ಸಂಸ್ಥೆಯ ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ರ್ಯಾಂಕ್ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ನಿರ್ದೇಶಕಿ ಸುಷ್ಮಾ ಬೋಪಣ್ಣ ಅಭಿನಂದನೆ ಸಲ್ಲಿಸಿದ್ದಾರೆ.