<p><strong>ಬೆಂಗಳೂರು:</strong> ‘ನೇಕಾರ ಸಮುದಾಯಗಳ ಬಹುಕಾಲದ ಬೇಡಿಕೆಯಾಗಿರುವ ನೇಕಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಮುದಾಯದ ಮುಖಂಡರನ್ನೊಳಗೊಂಡ ನಿಯೋಗವನ್ನು ಶೀಘ್ರವೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳಿಗೆ ಕರೆದೊಯ್ಯಲಾಗುವುದು’ ಎಂದುರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ ತಿಳಿಸಿದರು.</p>.<p>ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟವು ಭಾನುವಾರ ಹಮ್ಮಿಕೊಂಡಿದ್ದ ರಾಜ್ಯಸಭಾ ಸದಸ್ಯ ಕೆ.ನಾರಾಯಣ್ ಅವರ ಅಭಿನಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸುವಂತೆಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಈವರೆಗೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ವೀರಶೈವ, ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ₹500 ಕೋಟಿ ಅನುದಾನ ನೀಡಿರುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ, ನೇಕಾರ ಸಮುದಾಯಕ್ಕೂ ನಿಗಮದ ಅಗತ್ಯ ಇರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು’ ಒತ್ತಾಯಿಸಿದರು.</p>.<p>ಒಕ್ಕೂಟದ ಗೌರವಾಧ್ಯಕ್ಷ ಕೆ.ಸಿ.ಕೊಂಡಯ್ಯ, ‘ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು, ₹150 ಕೋಟಿಗೂ ಹೆಚ್ಚು ಹಣ ವ್ಯಯ ಮಾಡಿ ‘ಜಾತಿಗಣತಿ ವರದಿ’ ಸಿದ್ಧಪಡಿಸಿದ್ದರು. ಆ ವರದಿಯನ್ನು ಈಗಿನ ಸರ್ಕಾರ ಕೂಡಲೇ ಸ್ವೀಕರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಗುಳೇದಗುಡ್ಡದ ಬಸವರಾಜ ಪಟ್ಟದಾರ್ಯ ಸ್ವಾಮೀಜಿ,‘ನೇಕಾರರನ್ನು ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಸ್ಥಾಪನೆಗೊಂಡಿರುವ ನೇಕಾರ ಸಮುದಾಯಗಳ ಒಕ್ಕೂಟವು ಸಂಘಟನಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ರಾಜ್ಯಸಭಾ ಸದಸ್ಯ ಕೆ.ನಾರಾಯಣ್,‘ಸಮಾಜದಿಂದ ಪಡೆಯುವ ಯಾವುದೇ ಲಾಭದಲ್ಲಿ ಒಂದಿಷ್ಟು ಹಣವನ್ನು ಸಮಾಜದ ಅಭಿವೃದ್ಧಿಗಾಗಿ ನೀಡುವುದು ಮನುಷ್ಯ ಧರ್ಮ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನೇಕಾರ ಸಮುದಾಯಗಳ ಬಹುಕಾಲದ ಬೇಡಿಕೆಯಾಗಿರುವ ನೇಕಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಮುದಾಯದ ಮುಖಂಡರನ್ನೊಳಗೊಂಡ ನಿಯೋಗವನ್ನು ಶೀಘ್ರವೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಳಿಗೆ ಕರೆದೊಯ್ಯಲಾಗುವುದು’ ಎಂದುರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ ತಿಳಿಸಿದರು.</p>.<p>ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟವು ಭಾನುವಾರ ಹಮ್ಮಿಕೊಂಡಿದ್ದ ರಾಜ್ಯಸಭಾ ಸದಸ್ಯ ಕೆ.ನಾರಾಯಣ್ ಅವರ ಅಭಿನಂದನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸುವಂತೆಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಈವರೆಗೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ವೀರಶೈವ, ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ₹500 ಕೋಟಿ ಅನುದಾನ ನೀಡಿರುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ, ನೇಕಾರ ಸಮುದಾಯಕ್ಕೂ ನಿಗಮದ ಅಗತ್ಯ ಇರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು’ ಒತ್ತಾಯಿಸಿದರು.</p>.<p>ಒಕ್ಕೂಟದ ಗೌರವಾಧ್ಯಕ್ಷ ಕೆ.ಸಿ.ಕೊಂಡಯ್ಯ, ‘ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು, ₹150 ಕೋಟಿಗೂ ಹೆಚ್ಚು ಹಣ ವ್ಯಯ ಮಾಡಿ ‘ಜಾತಿಗಣತಿ ವರದಿ’ ಸಿದ್ಧಪಡಿಸಿದ್ದರು. ಆ ವರದಿಯನ್ನು ಈಗಿನ ಸರ್ಕಾರ ಕೂಡಲೇ ಸ್ವೀಕರಿಸಬೇಕು’ ಎಂದು ಒತ್ತಾಯಿಸಿದರು.</p>.<p>ಗುಳೇದಗುಡ್ಡದ ಬಸವರಾಜ ಪಟ್ಟದಾರ್ಯ ಸ್ವಾಮೀಜಿ,‘ನೇಕಾರರನ್ನು ಶಕ್ತಿ ಹೆಚ್ಚಿಸುವ ಉದ್ದೇಶದಿಂದ ಸ್ಥಾಪನೆಗೊಂಡಿರುವ ನೇಕಾರ ಸಮುದಾಯಗಳ ಒಕ್ಕೂಟವು ಸಂಘಟನಾ ಶಕ್ತಿಯನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ರಾಜ್ಯಸಭಾ ಸದಸ್ಯ ಕೆ.ನಾರಾಯಣ್,‘ಸಮಾಜದಿಂದ ಪಡೆಯುವ ಯಾವುದೇ ಲಾಭದಲ್ಲಿ ಒಂದಿಷ್ಟು ಹಣವನ್ನು ಸಮಾಜದ ಅಭಿವೃದ್ಧಿಗಾಗಿ ನೀಡುವುದು ಮನುಷ್ಯ ಧರ್ಮ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>