‘ಯಡಿಯೂರಪ್ಪ ಲವಲವಿಕೆಯಿಂದ ಇದ್ದಾರೆ. ಅವರು ರಾಜ್ಯಪಾಲ ಹುದ್ದೆ ತಿರಸ್ಕರಿಸಿದ್ದಾರೆ. ಕನ್ನಡಿಗರು ನೀಡುವವರು, ಬೇಡುವವರಲ್ಲ. ಅವರ ಮೇಲೆ ಆರೋಪ, ಪ್ರತ್ಯಾರೋಪ ಇರಬಹುದು. ಅದು ಬೇರೆ ವಿಷಯ. ಅಧಿಕಾರ ಇದ್ದಾಗ ನಾನು ದೂರ ಇರುವ ಮನುಷ್ಯ. ರಾಜೀನಾಮೆ ನೀಡಿರುವುದರಿಂದ ಭೇಟಿ ಮಾಡಲು ಬಂದಿದ್ದೇನೆ’ ಎಂದು ಸಮರ್ಥಿಸಿದರು. ಯಡಿಯೂರಪ್ಪ ಬದಲಾವಣೆಯ ಬಗ್ಗೆ ಮಾತನಾಡಿದ ಅವರು, ‘ಒರಿಜಿನಲ್ ಕಾಪಿ ಇಲ್ಲ. ಜೆರಾಕ್ಸ್ ತಗೊಂಡು ಏನು ಮಾಡುವುದು. ಯಡಿಯೂರಪ್ಪ ಅವರನ್ನು ಬಿಟ್ಟು ಮುಖ್ಯಮಂತ್ರಿ ಯಾರೇ ಆಗಲಿ, ನಮ್ಮ ಜನ ಒಪ್ಪಲ್ಲ. ನಾನು ಏನು ಹೇಳಿದರೂ ನಂಬುತ್ತಿರಲಿಲ್ಲ. ಈಗ ನನ್ನ ಅಂದಾಜಿನ ಪ್ರಕಾರವೇ ನಡೆದಿದೆ’ ಎಂದರು.