‘ಭಾಷಾ ಅಲ್ಪಸಂಖ್ಯಾತರಿಗೆ ಅವರ ಮಾತೃಭಾಷೆಯಲ್ಲಿ ಅಭ್ಯಾಸಕ್ಕೆ ಅವಕಾಶವಿಲ್ಲದೆ ಇರುವುದರಿಂದ ಎದುರಾಗುವ ಕಾನೂನು ತೊಡಕುಗಳನ್ನೂ ಗಮನಿಸಬೇಕು. ಗೋಕಾಕ್ ವರದಿಗೆ ಅನುಗುಣವಾಗಿ 1982ರ ಜು.20 ರಂದು ಆದೇಶ ಹೊರಡಿಸಿದ್ದ ಕರ್ನಾಟಕ ಸರ್ಕಾರ, ಪ್ರೌಢಶಾಲೆಯಲ್ಲಿ ಪ್ರಥಮ ಭಾಷೆಯಾಗಿ ಕನ್ನಡವನ್ನು ಕಡ್ಡಾಯ ಮಾಡಿತ್ತು. ಆದರೆ, ಈ ಆದೇಶವನ್ನು ಹೈಕೋರ್ಟ್ ರದ್ದು ಮಾಡಿತ್ತು. ಹಾಗಾಗಿ, ಕನ್ನಡ ಕಡ್ಡಾಯಕ್ಕೆ ಎದುರಾಗುವ ಕಾನೂನಾತ್ಮಕ ತೊಡಕುಗಳನ್ನು ಈಗಲೇ ನಿವಾರಣೆ ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿದ್ದಾರೆ.