<p><strong>ಬೆಂಗಳೂರು:</strong>ಕೋವಿಡ್ ನಿಯಂತ್ರಣ ಕ್ಕಾಗಿ ರಾಜ್ಯದಾದ್ಯಂತ ರಾತ್ರಿ 9 ಗಂಟೆಯಿಂದ ಮುಂಜಾನೆ 6 ಗಂಟೆಯವರೆಗೆ ಕರ್ಫ್ಯೂ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಬುಧವಾರದಿಂದ (ಏ.21) ಮೇ 4 ರ ವರೆಗೆ ಜಾರಿಯಲ್ಲಿ ಇರಲಿದೆ.</p>.<p>ಈ ಅವಧಿಯಲ್ಲಿ ವಾರಾಂತ್ಯದಲ್ಲಿ ಅಂದರೆ ಶನಿವಾರ ಮತ್ತು ಭಾನುವಾರಗಳಂದು ಇಡೀ ದಿನ ಕರ್ಫ್ಯೂ ಇರುತ್ತದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸುದ್ದಿಗಾರರಿಗೆ ತಿಳಿಸಿದರು.</p>.<p>ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲ್ಲ ಪಕ್ಷಗಳ ನಾಯಕರು, ತಾಂತ್ರಿಕ ಸಮಿತಿ ತಜ್ಞರು ಮತ್ತು ಸಚಿವರ ಜತೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.</p>.<p>ರಾತ್ರಿ ಕರ್ಫ್ಯೂ: ಪ್ರತಿ ದಿನ ರಾತ್ರಿ 9 ರಿಂದ ಮಾರನೆ ದಿನದ ಬೆಳಿಗ್ಗೆ 6ರವರೆಗೆ ಕರ್ಫ್ಯೂ ಇರುತ್ತದೆ. ಈ ಸಂದರ್ಭದಲ್ಲಿ ಎಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ವಾರಾಂತ್ಯದಲ್ಲಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಕರ್ಫ್ಯೂ ಇರುತ್ತದೆ.</p>.<p>ಏನೆಲ್ಲ ಬಂದ್</p>.<p>l ಶಾಲೆಗಳು, ಕಾಲೇಜುಗಳು, ಕೋಚಿಂಗ್ ಕೇಂದ್ರಗಳು. (ಆನ್ಲೈನ್, ದೂರಶಿಕ್ಷಣ ಮುಂದುವರೆಸಬಹುದು)</p>.<p>l ಸಿನಿಮಾ ಹಾಲ್ಗಳು, ಶಾಪಿಂಗ್ ಮಾಲ್, ಜಿಮ್ನಾಷಿಯಂ, ಯೋಗ ಕೇಂದ್ರಗಳು, ಸ್ಪಾ, ಕ್ರೀಡಾ ಕಾಂಪ್ಲೆಕ್ಸ್ಗಳು, ಸ್ಟೇಡಿಯಂ, ಈಜುಕೊಳ, ಮನರಂಜನಾ ಅಮ್ಯೂಸ್ಮೆಂಟ್ ಪಾರ್ಕ್, ಬಾರ್, ಆಡಿಟೋರಿಯಂಗಳು ಮತ್ತಿತರ ಸಮಾವೇಶದ ತಾಣಗಳು</p>.<p>l ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡಾ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಸಮಾವೇಶಗಳು</p>.<p>l ಆಟದ ಮೈದಾನದಲ್ಲಿ ಯಾವುದೇ ಕ್ರೀಡಾ ಕೂಟಗಳು ಇದ್ದರೆ ಪ್ರೇಕ್ಷಕರಿಗೆ ಅವಕಾಶ ಇಲ್ಲ. ಆದರೆ, ಕ್ರೀಡಾಳುಗಳ ತರಬೇತಿಗೆ ಅವಕಾಶ ಇದೆ</p>.<p>l ಎಲ್ಲಾ ಧಾರ್ಮಿಕ ಸ್ಥಳಗಳು, ಪೂಜಾ, ಪ್ರಾರ್ಥನಾ ಮಂದಿರಗಳಿಗೆ ಭಕ್ತರಿಗೆ ಅವಕಾಶ ಇಲ್ಲ. ಆದರೆ, ಪೂಜಾ ಕೈಂಕರ್ಯ ನಡೆಸಲು ಅರ್ಚಕರಿಗೆ ಅವಕಾಶ ಇದೆ. ಆಯಾ ಧರ್ಮಗಳ ಧಾರ್ಮಿಕ ವಿಧಿ–ವಿಧಾನ ನಡೆಸಲು ಅವಕಾಶ ಇದೆ.</p>.<p>lಹೋಟೆಲ್ ಮತ್ತು ರೆಸ್ಟೊರೆಂಟ್ ಗಳಲ್ಲಿ ಪಾರ್ಸೆಲ್ ಮಾತ್ರ ಒಯ್ಯಲು ಅವಕಾಶ ಇದೆ.</p>.<p>lಮದುವೆ ಸಮಾರಂಭಕ್ಕೆ 50ಕ್ಕೆ ಜನರಿಗೆ ಮಿತಿ. ಶವ ಸಂಸ್ಕಾರ, ಅಂತಿಮ ದರ್ಶನಕ್ಕೆ 20 ಜನರಿಗಷ್ಟೇ ಅವಕಾಶ.</p>.<p><strong>ನಿರ್ಮಾಣ ಚಟುವಟಿಕೆಗಳು</strong></p>.<p>lಎಲ್ಲ ರೀತಿಯ ನಿರ್ಮಾಣ ಚಟುವ<br />ಟಿಕೆಗಳು, ರಿಪೇರಿ ಚಟುವಟಿಕೆಗಳಿಗೆ ಅವಕಾಶ ಇದೆ. ಮುಂಗಾರು ಪೂರ್ವ ಕಾಮಗಾರಿಗಳನ್ನು ನಡೆಸಬಹುದು. ಆದರೆ, ಇವುಗಳಿಗೆ ಅನುಮತಿ ಪಡೆದು ಕೋವಿಡ್ ನಿಯಮ ಪಾಲಿಸಿ ಚಟುವಟಿಕೆ ನಡೆಸಬಹುದು.</p>.<p><strong>ಕೈಗಾರಿಕೆಗಳಿಗೆ ಅವಕಾಶ</strong></p>.<p><strong>l</strong>ಎಲ್ಲ ಕೈಗಾರಿಕೆಗಳು, ಉತ್ಪಾದನಾ ಘಟಕಗಳನ್ನು ಕೋವಿಡ್ ನಿಯಮ ಪಾಲಿಸಿ ನಡೆಸಬಹುದು. ಕಾರ್ಮಿಕರು ಮತ್ತು ಸಿಬ್ಬಂದಿಯನ್ನು ಸಾಗಣೆ ಮಾಡಲು ಕೆಲಸದ ಸ್ಥಳದ ಗುರುತಿನ ಚೀಟಿ ಇರುವುದು ಅಗತ್ಯ.</p>.<p><strong>ವಾಣಿಜ್ಯ ಚಟುವಟಿಕೆಗಳು</strong></p>.<p>lಕಿರಾಣಿ ಅಂಗಡಿ, ನ್ಯಾಯ ಬೆಲೆ ಅಂಗಡಿ, ಆಹಾರ ಪದಾರ್ಥಗಳು, ಹಣ್ಣು, ತರಕಾರಿ, ಡೇರಿ, ಹಾಲು ಮತ್ತು ಇತರ ಉತ್ಪನ್ನಗಳು, ಮೀನು– ಮಾಂಸ, ಪ್ರಾಣಿಗಳ ಆಹಾರಗಳ ಮಾರಾಟಕ್ಕೆ ಅವಕಾಶ ಇದೆ.</p>.<p>lಹೂವು, ಹಣ್ಣು, ತರಕಾರಿ ಸಗಟು ಮಾರುಕಟ್ಟೆಗಳನ್ನು ಏ.23 ರ ಬಳಿಕ ಮುಕ್ತ ಪ್ರದೇಶ ಅಥವಾ ಮೈದಾನಗಳಿಗೆ ಸ್ಥಳಾಂತರ.</p>.<p>lಲಾಡ್ಜ್ ಮತ್ತು ಹೋಟೆಲ್ಗಳಲ್ಲಿ ಉಳಿದುಕೊಂಡ ಅತಿಥಿಗಳಿಗೆ ಆಹಾರ ಪೂರೈಕೆ ಮಾಡಬಹುದು</p>.<p>lಸಲೂನು, ಬ್ಯೂಟಿ ಪಾರ್ಲರ್ಗಳು ಕೋವಿಡ್ ನಿಯಮ ಪಾಲಿಸಿ ಕಾರ್ಯಾಚರಣೆ ನಡೆಸಬಹುದು.</p>.<p>lಬಸ್ ಮತ್ತು ರೈಲು ಓಡಾಟಕ್ಕೆ ಅವಕಾಶ. ಖಾಸಗಿ ವಾಹನಗಳಲ್ಲಿ ಅನಗತ್ಯ ಓಡಾಡುವುದಕ್ಕೆ ನಿರ್ಬಂಧ.</p>.<p>lಪೆಟ್ರೋಲ್ ಬಂಕ್, ಗ್ಯಾಸ್ ಸೇವೆಗಳಿಗೆ ಅವಕಾಶ.</p>.<p>lಆರೋಗ್ಯ ಮತ್ತು ಅದಕ್ಕೆ ಸಂಬಂಧಿಸಿದಎಲ್ಲ ಚಟುವಟಿಕೆ ನಡೆಬಹುದು. ಆಸ್ಪತ್ರೆ, ಪ್ರಯೋಗಾಲಯ ಇತ್ಯಾದಿ ತೆರೆಯಬಹುದು.</p>.<p><strong>ಸರ್ಕಾರಿ ಮತ್ತು ಇತರ ಸಿಬ್ಬಂದಿಗಳು</strong></p>.<p>lಐಟಿ–ಬಿಟಿ ಮತ್ತು ಖಾಸಗಿ ಕಂಪನಿಗಳ ಉದ್ಯೋಗಿಗಳು ಮನೆಯಿಂದ ಕೆಲಸ ಮಾಡಲು ಅವಕಾಶ</p>.<p>lಸರ್ಕಾರಿ ಕಚೇರಿಗಳಲ್ಲಿ ಶೇ 50ರಷ್ಟು ಕಚೇರಿಯಿಂದ ಉಳಿದ ಶೇ 50 ರಷ್ಟು ಸಿಬ್ಬಂದಿಯನ್ನು ಕೋವಿಡ್ ಕಾರ್ಯದಲ್ಲಿ ತೊಡಗಿಸಿಕೊಳ್ಳ ಲಾಗುವುದು.</p>.<p>ರಾಜ್ಯಪಾಲರ ಸಭೆಗೆ ಈಶ್ವರಪ್ಪ ಅಚ್ಚರಿ</p>.<p>ರಾಜ್ಯದಲ್ಲಿ ಚುನಾಯಿತ ಸರ್ಕಾರ ಅಸ್ತಿತ್ವದಲ್ಲಿ ಇರುವಾಗ ರಾಜ್ಯಪಾಲರು ಕೋವಿಡ್ ವಿಚಾರ ಚರ್ಚಿಸಲು ಏಕೆ ಸಭೆ ಕರೆದಿದ್ದಾರೆ ಗೊತ್ತಿಲ್ಲ. ಆದರೆ, ಅವರ ನಡೆ ಹೊಸ ವ್ಯವಸ್ಥೆಗೆ ನಾಂದಿ ಹಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಹೇಳಿದರು.</p>.<p>‘ರಾಜ್ಯಪಾಲರು ಸಭೆ ಕರೆಯಬಾರದು ಎಂಬ ನಿಯಮ ಇಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚಾಗುತ್ತಿರುವ ಕಾರಣ ಜನರ ಸುರಕ್ಷತೆ ದೃಷ್ಟಿಯಿಂದ ರಾಜ್ಯಪಾಲರು ಸಭೆ ಕರೆದಿರಬಹುದು. ಅವರು ತೆಗೆದುಕೊಳ್ಳುವ ನಿರ್ಧಾರ ರಾಜ್ಯಕ್ಕೆ ಒಳಿತು ಮಾಡುತ್ತದೆ ಎಂಬ ನಂಬಿಕೆ ಇದೆ’ ಎಂದರು.</p>.<p>ಅತಿ ಕಠಿಣ ಕ್ರಮ ತೆಗೆದುಕೊಳ್ಳಿ:ರಾಜ್ಯಪಾಲ</p>.<p>‘ನಮಗೆ ಬೇಕಿರುವುದು ಆರೋಗ್ಯಪೂರ್ಣ ಕರ್ನಾಟಕ. ಆದ್ದರಿಂದ ಜನರ ಜೀವ ಮತ್ತು ಆರೋಗ್ಯ ಉಳಿಸಲು ಕಠಿಣ ಕ್ರಮ ತೆಗೆದುಕೊಳ್ಳಿ’ ಎಂದು ರಾಜ್ಯಪಾಲ ವಜುಭಾಯಿ ವಾಲಾ ಸಲಹೆ ನೀಡಿದರು.</p>.<p>‘ಇದಕ್ಕಾಗಿ ಅಗತ್ಯವಿದ್ದರೆ ಲಾಕ್ಡೌನ್ ಸೇರಿದಂತೆ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಿ. ಜನ ಹಸಿವಿನಿಂದ ಸಾಯುವುದಿಲ್ಲ ಎಂಬ ವಿಶ್ವಾಸವಿದೆ. ಕಾರ್ಮಿಕರು, ಬಡವರ ಬಗ್ಗೆ ಕಾಳಜಿ ವಹಿಸಿ. ಲಾಕ್ಡೌನ್ ಆದರೆ ಜನ ಭಯ ಪಡಬಾರದು. ಜನ ಸಹಕಾರ ನೀಡಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರು ಸೂಕ್ತ ನಿರ್ಣಯ ಕೈಗೊಳ್ಳಬೇಕು’ ಎಂದರು.</p>.<p><strong>***</strong></p>.<p>ಲೋಪಗಳ ಬಗ್ಗೆಯೇ ಚರ್ಚೆ ಮಾಡುವುದಕ್ಕಿಂತ ಜನರ ಜೀವ ಉಳಿಸುವುದು ಮುಖ್ಯ. ಯಾರ ಮರ್ಜಿಗೂ ಒಳಗಾಗದೇ ಲಾಕ್ಡೌನ್ ಮಾಡಿ</p>.<p><strong>- ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ</strong></p>.<p>ರಾಜ್ಯಪಾಲರು ಸಭೆ ಕರೆದಿರುವುದು ಸಂವಿಧಾನ ಬಾಹಿರ, ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಚಾಚೂ ತಪ್ಪದೆ ಜಾರಿ ಮಾಡಿ</p>.<p><strong>- ಸಿದ್ದರಾಮಯ್ಯ, ವಿರೋಧಪಕ್ಷದ ನಾಯಕ, ವಿಧಾನಸಭೆ</strong></p>.<p>ಸರ್ಕಾರ ತೆಗೆದುಕೊಳ್ಳುವ ಕಠಿಣ ನಿರ್ಧಾರಗಳು ಕಷ್ಟ ಎನಿಸಿದರೂ ಅನುಸರಿಸಿಕೊಂಡು ಹೋಗಬೇಕು. ಎಲ್ಲರೂ ಸಹಕರಿಸಬೇಕು</p>.<p><strong>- ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ</strong><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಕೋವಿಡ್ ನಿಯಂತ್ರಣ ಕ್ಕಾಗಿ ರಾಜ್ಯದಾದ್ಯಂತ ರಾತ್ರಿ 9 ಗಂಟೆಯಿಂದ ಮುಂಜಾನೆ 6 ಗಂಟೆಯವರೆಗೆ ಕರ್ಫ್ಯೂ ವಿಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದು ಬುಧವಾರದಿಂದ (ಏ.21) ಮೇ 4 ರ ವರೆಗೆ ಜಾರಿಯಲ್ಲಿ ಇರಲಿದೆ.</p>.<p>ಈ ಅವಧಿಯಲ್ಲಿ ವಾರಾಂತ್ಯದಲ್ಲಿ ಅಂದರೆ ಶನಿವಾರ ಮತ್ತು ಭಾನುವಾರಗಳಂದು ಇಡೀ ದಿನ ಕರ್ಫ್ಯೂ ಇರುತ್ತದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸುದ್ದಿಗಾರರಿಗೆ ತಿಳಿಸಿದರು.</p>.<p>ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎಲ್ಲ ಪಕ್ಷಗಳ ನಾಯಕರು, ತಾಂತ್ರಿಕ ಸಮಿತಿ ತಜ್ಞರು ಮತ್ತು ಸಚಿವರ ಜತೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.</p>.<p>ರಾತ್ರಿ ಕರ್ಫ್ಯೂ: ಪ್ರತಿ ದಿನ ರಾತ್ರಿ 9 ರಿಂದ ಮಾರನೆ ದಿನದ ಬೆಳಿಗ್ಗೆ 6ರವರೆಗೆ ಕರ್ಫ್ಯೂ ಇರುತ್ತದೆ. ಈ ಸಂದರ್ಭದಲ್ಲಿ ಎಲ್ಲ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ವಾರಾಂತ್ಯದಲ್ಲಿ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಕರ್ಫ್ಯೂ ಇರುತ್ತದೆ.</p>.<p>ಏನೆಲ್ಲ ಬಂದ್</p>.<p>l ಶಾಲೆಗಳು, ಕಾಲೇಜುಗಳು, ಕೋಚಿಂಗ್ ಕೇಂದ್ರಗಳು. (ಆನ್ಲೈನ್, ದೂರಶಿಕ್ಷಣ ಮುಂದುವರೆಸಬಹುದು)</p>.<p>l ಸಿನಿಮಾ ಹಾಲ್ಗಳು, ಶಾಪಿಂಗ್ ಮಾಲ್, ಜಿಮ್ನಾಷಿಯಂ, ಯೋಗ ಕೇಂದ್ರಗಳು, ಸ್ಪಾ, ಕ್ರೀಡಾ ಕಾಂಪ್ಲೆಕ್ಸ್ಗಳು, ಸ್ಟೇಡಿಯಂ, ಈಜುಕೊಳ, ಮನರಂಜನಾ ಅಮ್ಯೂಸ್ಮೆಂಟ್ ಪಾರ್ಕ್, ಬಾರ್, ಆಡಿಟೋರಿಯಂಗಳು ಮತ್ತಿತರ ಸಮಾವೇಶದ ತಾಣಗಳು</p>.<p>l ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡಾ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಸಮಾವೇಶಗಳು</p>.<p>l ಆಟದ ಮೈದಾನದಲ್ಲಿ ಯಾವುದೇ ಕ್ರೀಡಾ ಕೂಟಗಳು ಇದ್ದರೆ ಪ್ರೇಕ್ಷಕರಿಗೆ ಅವಕಾಶ ಇಲ್ಲ. ಆದರೆ, ಕ್ರೀಡಾಳುಗಳ ತರಬೇತಿಗೆ ಅವಕಾಶ ಇದೆ</p>.<p>l ಎಲ್ಲಾ ಧಾರ್ಮಿಕ ಸ್ಥಳಗಳು, ಪೂಜಾ, ಪ್ರಾರ್ಥನಾ ಮಂದಿರಗಳಿಗೆ ಭಕ್ತರಿಗೆ ಅವಕಾಶ ಇಲ್ಲ. ಆದರೆ, ಪೂಜಾ ಕೈಂಕರ್ಯ ನಡೆಸಲು ಅರ್ಚಕರಿಗೆ ಅವಕಾಶ ಇದೆ. ಆಯಾ ಧರ್ಮಗಳ ಧಾರ್ಮಿಕ ವಿಧಿ–ವಿಧಾನ ನಡೆಸಲು ಅವಕಾಶ ಇದೆ.</p>.<p>lಹೋಟೆಲ್ ಮತ್ತು ರೆಸ್ಟೊರೆಂಟ್ ಗಳಲ್ಲಿ ಪಾರ್ಸೆಲ್ ಮಾತ್ರ ಒಯ್ಯಲು ಅವಕಾಶ ಇದೆ.</p>.<p>lಮದುವೆ ಸಮಾರಂಭಕ್ಕೆ 50ಕ್ಕೆ ಜನರಿಗೆ ಮಿತಿ. ಶವ ಸಂಸ್ಕಾರ, ಅಂತಿಮ ದರ್ಶನಕ್ಕೆ 20 ಜನರಿಗಷ್ಟೇ ಅವಕಾಶ.</p>.<p><strong>ನಿರ್ಮಾಣ ಚಟುವಟಿಕೆಗಳು</strong></p>.<p>lಎಲ್ಲ ರೀತಿಯ ನಿರ್ಮಾಣ ಚಟುವ<br />ಟಿಕೆಗಳು, ರಿಪೇರಿ ಚಟುವಟಿಕೆಗಳಿಗೆ ಅವಕಾಶ ಇದೆ. ಮುಂಗಾರು ಪೂರ್ವ ಕಾಮಗಾರಿಗಳನ್ನು ನಡೆಸಬಹುದು. ಆದರೆ, ಇವುಗಳಿಗೆ ಅನುಮತಿ ಪಡೆದು ಕೋವಿಡ್ ನಿಯಮ ಪಾಲಿಸಿ ಚಟುವಟಿಕೆ ನಡೆಸಬಹುದು.</p>.<p><strong>ಕೈಗಾರಿಕೆಗಳಿಗೆ ಅವಕಾಶ</strong></p>.<p><strong>l</strong>ಎಲ್ಲ ಕೈಗಾರಿಕೆಗಳು, ಉತ್ಪಾದನಾ ಘಟಕಗಳನ್ನು ಕೋವಿಡ್ ನಿಯಮ ಪಾಲಿಸಿ ನಡೆಸಬಹುದು. ಕಾರ್ಮಿಕರು ಮತ್ತು ಸಿಬ್ಬಂದಿಯನ್ನು ಸಾಗಣೆ ಮಾಡಲು ಕೆಲಸದ ಸ್ಥಳದ ಗುರುತಿನ ಚೀಟಿ ಇರುವುದು ಅಗತ್ಯ.</p>.<p><strong>ವಾಣಿಜ್ಯ ಚಟುವಟಿಕೆಗಳು</strong></p>.<p>lಕಿರಾಣಿ ಅಂಗಡಿ, ನ್ಯಾಯ ಬೆಲೆ ಅಂಗಡಿ, ಆಹಾರ ಪದಾರ್ಥಗಳು, ಹಣ್ಣು, ತರಕಾರಿ, ಡೇರಿ, ಹಾಲು ಮತ್ತು ಇತರ ಉತ್ಪನ್ನಗಳು, ಮೀನು– ಮಾಂಸ, ಪ್ರಾಣಿಗಳ ಆಹಾರಗಳ ಮಾರಾಟಕ್ಕೆ ಅವಕಾಶ ಇದೆ.</p>.<p>lಹೂವು, ಹಣ್ಣು, ತರಕಾರಿ ಸಗಟು ಮಾರುಕಟ್ಟೆಗಳನ್ನು ಏ.23 ರ ಬಳಿಕ ಮುಕ್ತ ಪ್ರದೇಶ ಅಥವಾ ಮೈದಾನಗಳಿಗೆ ಸ್ಥಳಾಂತರ.</p>.<p>lಲಾಡ್ಜ್ ಮತ್ತು ಹೋಟೆಲ್ಗಳಲ್ಲಿ ಉಳಿದುಕೊಂಡ ಅತಿಥಿಗಳಿಗೆ ಆಹಾರ ಪೂರೈಕೆ ಮಾಡಬಹುದು</p>.<p>lಸಲೂನು, ಬ್ಯೂಟಿ ಪಾರ್ಲರ್ಗಳು ಕೋವಿಡ್ ನಿಯಮ ಪಾಲಿಸಿ ಕಾರ್ಯಾಚರಣೆ ನಡೆಸಬಹುದು.</p>.<p>lಬಸ್ ಮತ್ತು ರೈಲು ಓಡಾಟಕ್ಕೆ ಅವಕಾಶ. ಖಾಸಗಿ ವಾಹನಗಳಲ್ಲಿ ಅನಗತ್ಯ ಓಡಾಡುವುದಕ್ಕೆ ನಿರ್ಬಂಧ.</p>.<p>lಪೆಟ್ರೋಲ್ ಬಂಕ್, ಗ್ಯಾಸ್ ಸೇವೆಗಳಿಗೆ ಅವಕಾಶ.</p>.<p>lಆರೋಗ್ಯ ಮತ್ತು ಅದಕ್ಕೆ ಸಂಬಂಧಿಸಿದಎಲ್ಲ ಚಟುವಟಿಕೆ ನಡೆಬಹುದು. ಆಸ್ಪತ್ರೆ, ಪ್ರಯೋಗಾಲಯ ಇತ್ಯಾದಿ ತೆರೆಯಬಹುದು.</p>.<p><strong>ಸರ್ಕಾರಿ ಮತ್ತು ಇತರ ಸಿಬ್ಬಂದಿಗಳು</strong></p>.<p>lಐಟಿ–ಬಿಟಿ ಮತ್ತು ಖಾಸಗಿ ಕಂಪನಿಗಳ ಉದ್ಯೋಗಿಗಳು ಮನೆಯಿಂದ ಕೆಲಸ ಮಾಡಲು ಅವಕಾಶ</p>.<p>lಸರ್ಕಾರಿ ಕಚೇರಿಗಳಲ್ಲಿ ಶೇ 50ರಷ್ಟು ಕಚೇರಿಯಿಂದ ಉಳಿದ ಶೇ 50 ರಷ್ಟು ಸಿಬ್ಬಂದಿಯನ್ನು ಕೋವಿಡ್ ಕಾರ್ಯದಲ್ಲಿ ತೊಡಗಿಸಿಕೊಳ್ಳ ಲಾಗುವುದು.</p>.<p>ರಾಜ್ಯಪಾಲರ ಸಭೆಗೆ ಈಶ್ವರಪ್ಪ ಅಚ್ಚರಿ</p>.<p>ರಾಜ್ಯದಲ್ಲಿ ಚುನಾಯಿತ ಸರ್ಕಾರ ಅಸ್ತಿತ್ವದಲ್ಲಿ ಇರುವಾಗ ರಾಜ್ಯಪಾಲರು ಕೋವಿಡ್ ವಿಚಾರ ಚರ್ಚಿಸಲು ಏಕೆ ಸಭೆ ಕರೆದಿದ್ದಾರೆ ಗೊತ್ತಿಲ್ಲ. ಆದರೆ, ಅವರ ನಡೆ ಹೊಸ ವ್ಯವಸ್ಥೆಗೆ ನಾಂದಿ ಹಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ಹೇಳಿದರು.</p>.<p>‘ರಾಜ್ಯಪಾಲರು ಸಭೆ ಕರೆಯಬಾರದು ಎಂಬ ನಿಯಮ ಇಲ್ಲ. ರಾಜ್ಯದಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚಾಗುತ್ತಿರುವ ಕಾರಣ ಜನರ ಸುರಕ್ಷತೆ ದೃಷ್ಟಿಯಿಂದ ರಾಜ್ಯಪಾಲರು ಸಭೆ ಕರೆದಿರಬಹುದು. ಅವರು ತೆಗೆದುಕೊಳ್ಳುವ ನಿರ್ಧಾರ ರಾಜ್ಯಕ್ಕೆ ಒಳಿತು ಮಾಡುತ್ತದೆ ಎಂಬ ನಂಬಿಕೆ ಇದೆ’ ಎಂದರು.</p>.<p>ಅತಿ ಕಠಿಣ ಕ್ರಮ ತೆಗೆದುಕೊಳ್ಳಿ:ರಾಜ್ಯಪಾಲ</p>.<p>‘ನಮಗೆ ಬೇಕಿರುವುದು ಆರೋಗ್ಯಪೂರ್ಣ ಕರ್ನಾಟಕ. ಆದ್ದರಿಂದ ಜನರ ಜೀವ ಮತ್ತು ಆರೋಗ್ಯ ಉಳಿಸಲು ಕಠಿಣ ಕ್ರಮ ತೆಗೆದುಕೊಳ್ಳಿ’ ಎಂದು ರಾಜ್ಯಪಾಲ ವಜುಭಾಯಿ ವಾಲಾ ಸಲಹೆ ನೀಡಿದರು.</p>.<p>‘ಇದಕ್ಕಾಗಿ ಅಗತ್ಯವಿದ್ದರೆ ಲಾಕ್ಡೌನ್ ಸೇರಿದಂತೆ ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಿ. ಜನ ಹಸಿವಿನಿಂದ ಸಾಯುವುದಿಲ್ಲ ಎಂಬ ವಿಶ್ವಾಸವಿದೆ. ಕಾರ್ಮಿಕರು, ಬಡವರ ಬಗ್ಗೆ ಕಾಳಜಿ ವಹಿಸಿ. ಲಾಕ್ಡೌನ್ ಆದರೆ ಜನ ಭಯ ಪಡಬಾರದು. ಜನ ಸಹಕಾರ ನೀಡಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಯವರು ಸೂಕ್ತ ನಿರ್ಣಯ ಕೈಗೊಳ್ಳಬೇಕು’ ಎಂದರು.</p>.<p><strong>***</strong></p>.<p>ಲೋಪಗಳ ಬಗ್ಗೆಯೇ ಚರ್ಚೆ ಮಾಡುವುದಕ್ಕಿಂತ ಜನರ ಜೀವ ಉಳಿಸುವುದು ಮುಖ್ಯ. ಯಾರ ಮರ್ಜಿಗೂ ಒಳಗಾಗದೇ ಲಾಕ್ಡೌನ್ ಮಾಡಿ</p>.<p><strong>- ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ</strong></p>.<p>ರಾಜ್ಯಪಾಲರು ಸಭೆ ಕರೆದಿರುವುದು ಸಂವಿಧಾನ ಬಾಹಿರ, ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಚಾಚೂ ತಪ್ಪದೆ ಜಾರಿ ಮಾಡಿ</p>.<p><strong>- ಸಿದ್ದರಾಮಯ್ಯ, ವಿರೋಧಪಕ್ಷದ ನಾಯಕ, ವಿಧಾನಸಭೆ</strong></p>.<p>ಸರ್ಕಾರ ತೆಗೆದುಕೊಳ್ಳುವ ಕಠಿಣ ನಿರ್ಧಾರಗಳು ಕಷ್ಟ ಎನಿಸಿದರೂ ಅನುಸರಿಸಿಕೊಂಡು ಹೋಗಬೇಕು. ಎಲ್ಲರೂ ಸಹಕರಿಸಬೇಕು</p>.<p><strong>- ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ</strong><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>