ಕೊಚಿಮುಲ್ ಪ್ರತ್ಯೇಕಿಸುವ ಸುಧಾಕರ್ ಅವರ ಪ್ರಸ್ತಾವನೆಗೆ ಕೋಲಾರ ಜಿಲ್ಲೆಯ ಕಾಂಗ್ರೆಸ್ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದು ಬಿಜೆಪಿ–ಕಾಂಗ್ರೆಸ್ ನಾಯಕರ ಮಧ್ಯದ ವಾಕ್ಸಮರ, ಆರೋಪ– ಪ್ರತ್ಯಾರೋಪಕ್ಕೂ ಕಾರಣವಾಗಿತ್ತು. ಕೊನೆಗೂ ತಮ್ಮ ಹಟವನ್ನು ಸಾಧಿಸಿ, ಪ್ರತ್ಯೇಕ ಒಕ್ಕೂಟ ಸ್ಥಾಪಿಸುವಲ್ಲಿ ಸುಧಾಕರ್ ಯಶಸ್ವಿಯಾಗಿದ್ದಾರೆ.