<p><strong>ಯಾದಗಿರಿ: </strong>‘ಅಕ್ರಮ ಗಣಿಗಳನ್ನು ಸಕ್ರಮಗೊಳಿಸಲು ಹೊಸ ನಿಯಮ ಜಾರಿಗೆ ಸರ್ಕಾರಗಂಭೀರ ಚಿಂತನೆ ನಡೆಸಿದೆ. ಈ ಕುರಿತು ಚರ್ಚಿಸಿ ಮಾರ್ಗಸೂಚಿ ಸಿದ್ಧಪಡಿಸಲು ಜ. 27 ಮತ್ತು 28ರಂದು ಅಧಿಕಾರಿಗಳ ಸಭೆ ಕರೆಯಲಾಗಿದೆ' ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.</p>.<p>‘ಎಲ್ಲ ಅಕ್ರಮ ಗಣಿಗಳನ್ನುಸಕ್ರಮ ಮಾಡುವುದಿಲ್ಲ. ಹೊಸ ಮಾರ್ಗಸೂಚಿಗೆ ಅನುಗುಣವಾಗಿದ್ದರೆ ಮಾತ್ರ ಅಕ್ರಮ ಗಣಿಗಳನ್ನು ಸಕ್ರಮ ಮಾಡುತ್ತೇವೆ. ಇದೆಲ್ಲವೂಕಾನೂನಿನ ಚೌಕಟ್ಟಿನಲ್ಲಿ ನಡೆಯಲಿದೆ’ ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಅಕ್ರಮ ಗಣಿಗಾರಿಕೆ ತಡೆಗೆ ಬೇರೆ ರಾಜ್ಯಗಳಲ್ಲಿ ಯಾವ ರೀತಿ ಕಾಯ್ದೆ ಜಾರಿ ಮಾಡಿದ್ದಾರೆ ಎಂಬುದನ್ನು ಅಧ್ಯಯನ ಮಾಡಿ, ನಮ್ಮ ರಾಜ್ಯದಲ್ಲಿಯೂ ಹೊಸ ಗಣಿ ಕಾಯ್ದೆ ಜಾರಿಗೊಳಿಸಲಾಗುವುದು. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.</p>.<p>‘ದೇಶದಾದ್ಯಂತ ಹಲವಾರು ವರ್ಷಗಳಿಂದ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>‘ಅಕ್ರಮ ಗಣಿಗಳನ್ನು ಸಕ್ರಮಗೊಳಿಸಲು ಹೊಸ ನಿಯಮ ಜಾರಿಗೆ ಸರ್ಕಾರಗಂಭೀರ ಚಿಂತನೆ ನಡೆಸಿದೆ. ಈ ಕುರಿತು ಚರ್ಚಿಸಿ ಮಾರ್ಗಸೂಚಿ ಸಿದ್ಧಪಡಿಸಲು ಜ. 27 ಮತ್ತು 28ರಂದು ಅಧಿಕಾರಿಗಳ ಸಭೆ ಕರೆಯಲಾಗಿದೆ' ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.</p>.<p>‘ಎಲ್ಲ ಅಕ್ರಮ ಗಣಿಗಳನ್ನುಸಕ್ರಮ ಮಾಡುವುದಿಲ್ಲ. ಹೊಸ ಮಾರ್ಗಸೂಚಿಗೆ ಅನುಗುಣವಾಗಿದ್ದರೆ ಮಾತ್ರ ಅಕ್ರಮ ಗಣಿಗಳನ್ನು ಸಕ್ರಮ ಮಾಡುತ್ತೇವೆ. ಇದೆಲ್ಲವೂಕಾನೂನಿನ ಚೌಕಟ್ಟಿನಲ್ಲಿ ನಡೆಯಲಿದೆ’ ಎಂದು ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಅಕ್ರಮ ಗಣಿಗಾರಿಕೆ ತಡೆಗೆ ಬೇರೆ ರಾಜ್ಯಗಳಲ್ಲಿ ಯಾವ ರೀತಿ ಕಾಯ್ದೆ ಜಾರಿ ಮಾಡಿದ್ದಾರೆ ಎಂಬುದನ್ನು ಅಧ್ಯಯನ ಮಾಡಿ, ನಮ್ಮ ರಾಜ್ಯದಲ್ಲಿಯೂ ಹೊಸ ಗಣಿ ಕಾಯ್ದೆ ಜಾರಿಗೊಳಿಸಲಾಗುವುದು. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದರು.</p>.<p>‘ದೇಶದಾದ್ಯಂತ ಹಲವಾರು ವರ್ಷಗಳಿಂದ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ’ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>