ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ಜಮೀನು ಖರೀದಿಸಿದವರು ಅನ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಿಸಲು ಅರ್ಜಿ ಸಲ್ಲಿಸಿ ಆರು ತಿಂಗಳವರೆಗೂ ಕಾಯಬೇಕಾಗಿತ್ತು. ಇದರಿಂದ ಖರೀದಿದಾರರು, ಹೂಡಿಕೆ ದಾರರಿಗೆ ವಿಪರೀತ ಸಮಸ್ಯೆಗಳಾಗುತ್ತಿದ್ದವು. ಅದನ್ನು ತಪ್ಪಿಸಲು ಹೊಸ ನಿಯಮ ಜಾರಿಗೆ ತರಲಾಗುವುದು’ ಎಂದರು.