<p><strong>ಬೆಂಗಳೂರು:</strong> ಬ್ರಿಟನ್ನಿಂದ ರಾಜ್ಯಕ್ಕೆ ಬಂದವರಲ್ಲಿ ಮತ್ತೆ ಮೂವರಿಗೆ ರೂಪಾಂತರಗೊಂಡ ಕೊರೊನಾ ವೈರಾಣು ಇರುವುದು ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಹೊಸ ಮಾದರಿಯ ಕೋವಿಡ್ ಪೀಡಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.</p>.<p>ಬೆಂಗಳೂರಿನ ವಸಂತಪುರದಲ್ಲಿ ಇಬ್ಬರು ಹಾಗೂ ಜೆ.ಪಿ. ನಗರದಲ್ಲಿ ಒಬ್ಬರಲ್ಲಿ ಹೊಸ ಮಾದರಿಯ ವೈರಾಣು ಕಾಣಿಸಿಕೊಂಡಿದೆ. ಕೆಲ ದಿನಗಳ ಹಿಂದೆ ನಗರಕ್ಕೆ ಬಂದಿದ್ದ ಇವರು, ಕೋವಿಡ್ ಪೀಡಿತರಾಗಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿ, ಮಾದರಿಗಳನ್ನು ಜೆನೆಟಿಕ್ ಸೀಕ್ವೆನ್ಸ್ ಪರೀಕ್ಷೆಗೆ ನಿಮ್ಹಾನ್ಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಪರೀಕ್ಷೆಯ ವರದಿಯಲ್ಲಿ ರೂಪಾಂತರ ವೈರಾಣು ಇರುವುದು ದೃಢಪಟ್ಟಿದೆ. ಅವರೊಂದಿಗೆ ಸಂಪರ್ಕ ಹೊಂದಿರುವವರನ್ನು ಬಿಬಿಎಂಪಿ ಸಿಬ್ಬಂದಿ ಪತ್ತೆ ಮಾಡುತ್ತಿದ್ದಾರೆ.</p>.<p>ಬೆಂಗಳೂರಿನಲ್ಲಿ ರೂಪಾಂತರಗೊಂಡ ವೈರಾಣು ಹೊಂದಿರುವವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಕಳೆದ ಮಂಗಳವಾರ ರಾಜಾಜಿನಗರದಲ್ಲಿ ಎರಡು ಹಾಗೂ ಆರ್.ಆರ್. ನಗರದಲ್ಲಿ ಒಂದು ಪ್ರಕರಣ ವರದಿಯಾಗಿತ್ತು. ಶಿವಮೊಗ್ಗದಲ್ಲಿ ಒಂದೇ ಕುಟಂಬದ ನಾಲ್ವರಲ್ಲಿ ಹೊಸ ಮಾದರಿಯ ವೈರಾಣು ಕಾಣಿಸಿಕೊಂಡಿದೆ. ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.</p>.<p>ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ರೂಪಾಂತರಗೊಂಡ ಕೊರೊನಾ ವೈರಾಣು ಹೊಂದಿರುವವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಕೂಡ 10 ಮಂದಿ ಹೊಸ ಮಾದರಿಯ ವೈರಾಣು ಹೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬ್ರಿಟನ್ನಿಂದ ರಾಜ್ಯಕ್ಕೆ ಬಂದವರಲ್ಲಿ ಮತ್ತೆ ಮೂವರಿಗೆ ರೂಪಾಂತರಗೊಂಡ ಕೊರೊನಾ ವೈರಾಣು ಇರುವುದು ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಹೊಸ ಮಾದರಿಯ ಕೋವಿಡ್ ಪೀಡಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.</p>.<p>ಬೆಂಗಳೂರಿನ ವಸಂತಪುರದಲ್ಲಿ ಇಬ್ಬರು ಹಾಗೂ ಜೆ.ಪಿ. ನಗರದಲ್ಲಿ ಒಬ್ಬರಲ್ಲಿ ಹೊಸ ಮಾದರಿಯ ವೈರಾಣು ಕಾಣಿಸಿಕೊಂಡಿದೆ. ಕೆಲ ದಿನಗಳ ಹಿಂದೆ ನಗರಕ್ಕೆ ಬಂದಿದ್ದ ಇವರು, ಕೋವಿಡ್ ಪೀಡಿತರಾಗಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿ, ಮಾದರಿಗಳನ್ನು ಜೆನೆಟಿಕ್ ಸೀಕ್ವೆನ್ಸ್ ಪರೀಕ್ಷೆಗೆ ನಿಮ್ಹಾನ್ಸ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಪರೀಕ್ಷೆಯ ವರದಿಯಲ್ಲಿ ರೂಪಾಂತರ ವೈರಾಣು ಇರುವುದು ದೃಢಪಟ್ಟಿದೆ. ಅವರೊಂದಿಗೆ ಸಂಪರ್ಕ ಹೊಂದಿರುವವರನ್ನು ಬಿಬಿಎಂಪಿ ಸಿಬ್ಬಂದಿ ಪತ್ತೆ ಮಾಡುತ್ತಿದ್ದಾರೆ.</p>.<p>ಬೆಂಗಳೂರಿನಲ್ಲಿ ರೂಪಾಂತರಗೊಂಡ ವೈರಾಣು ಹೊಂದಿರುವವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಕಳೆದ ಮಂಗಳವಾರ ರಾಜಾಜಿನಗರದಲ್ಲಿ ಎರಡು ಹಾಗೂ ಆರ್.ಆರ್. ನಗರದಲ್ಲಿ ಒಂದು ಪ್ರಕರಣ ವರದಿಯಾಗಿತ್ತು. ಶಿವಮೊಗ್ಗದಲ್ಲಿ ಒಂದೇ ಕುಟಂಬದ ನಾಲ್ವರಲ್ಲಿ ಹೊಸ ಮಾದರಿಯ ವೈರಾಣು ಕಾಣಿಸಿಕೊಂಡಿದೆ. ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿದೆ.</p>.<p>ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ರೂಪಾಂತರಗೊಂಡ ಕೊರೊನಾ ವೈರಾಣು ಹೊಂದಿರುವವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ ಕೂಡ 10 ಮಂದಿ ಹೊಸ ಮಾದರಿಯ ವೈರಾಣು ಹೊಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>