ಕುಶಾಲನಗರ (ಕೊಡಗು ಜಿಲ್ಲೆ): ಇಲ್ಲಿನ 6ನೇ ಹೊಸಕೋಟೆ ಗ್ರಾಮದ ನಿವಾಸಿ ಅಕ್ಷಿತಾ (18) ಅವರು, ಮದುವೆಯಾದ ಐದನೇ ದಿನವಾದ ಬುಧವಾರ ಪತಿಯ ಮನೆಯಲ್ಲಿ ಮೃತಪಟ್ಟಿದ್ದು, ಪತಿ ಹೇಮಂತ್ (30), ಮಾವ ದಶರಥ ಹಾಗೂ ಅತ್ತೆ ಗಿರಿಜಾ ಅವರ ವಿರುದ್ಧ, ಕೊಲೆ ಹಾಗೂ ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.