<p><strong>ಮಡಿಕೇರಿ</strong>: ತಾಲ್ಲೂಕಿನ ಚೆಂಬು ಗ್ರಾಮದ ಉರುಬೈಲ್ ಎಂಬಲ್ಲಿ ಗುಂಪೊಂದು ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಕೊಡಗು ಡಿಸಿಐಬಿ ಪೊಲೀಸರು ದಾಳಿ ನಡೆಸಿ, 10 ಮಂದಿಯನ್ನು ಬಂಧಿಸಿ ನಗದು ಹಾಗೂ ಕೋಳಿ ವಶಕ್ಕೆ ಪಡೆದುಕೊಂಡಿದ್ದಾರೆ.</p>.<p>ಗ್ರಾಮದ ಸ್ಥಳವೊಂದರಲ್ಲಿ ಕೋಳಿಗಳನ್ನು ಕಟ್ಟಿ 10 ಮಂದಿ ಜೂಜಾಡುತ್ತಿದ್ದರು. ಕೋಳಿ ಅಂಕಕ್ಕೆ ಬಳಸಿದ ಅಂದಾಜು ₹ 15 ಸಾವಿರ, 35 ಕೋಳಿ ಹಾಗೂ ಸ್ಥಳದಲ್ಲಿದ್ದ ₹ 20,300 ನಗದು ವಶಕ್ಕೆ ಪಡೆದಿದ್ದಾರೆ.</p>.<p>ಡಿಸಿಐಬಿ ಇನ್ಸ್ಪೆಕ್ಟರ್ ಎನ್.ಕುಮಾರ್ ಆರಾಧ್ಯ, ಗ್ರಾಮಾಂತರ ಪಿಎಸ್ಐ ಎಚ್.ವಿ ಚಂದ್ರಶೇಖರ್, ಡಿ.ಸಿ.ಐ.ಬಿ ಸಿಬ್ಬಂದಿಗಳಾದ ವಿ.ಜಿ.ವೆಂಕಟೇಶ್, ಬಿ.ಎಲ್.ಯೋಗೇಶ್ ಕುಮಾರ್, ಕೆ.ಆರ್.ವಸಂತ, ಎಂ.ಎನ್.ನಿರಂಜನ, ಕೆ.ಎಸ್.ಶಶಿಕುಮಾರ್, ಸಂಪಾಜೆ ಉಪ ಠಾಣೆಯ ಎಎಸ್ಐ ಶ್ರೀಧರ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ ಇರಿಸುವಂತೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸಿದ್ದೇನೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ</strong>: ತಾಲ್ಲೂಕಿನ ಚೆಂಬು ಗ್ರಾಮದ ಉರುಬೈಲ್ ಎಂಬಲ್ಲಿ ಗುಂಪೊಂದು ನಡೆಸುತ್ತಿದ್ದ ಕೋಳಿ ಅಂಕದ ಮೇಲೆ ಕೊಡಗು ಡಿಸಿಐಬಿ ಪೊಲೀಸರು ದಾಳಿ ನಡೆಸಿ, 10 ಮಂದಿಯನ್ನು ಬಂಧಿಸಿ ನಗದು ಹಾಗೂ ಕೋಳಿ ವಶಕ್ಕೆ ಪಡೆದುಕೊಂಡಿದ್ದಾರೆ.</p>.<p>ಗ್ರಾಮದ ಸ್ಥಳವೊಂದರಲ್ಲಿ ಕೋಳಿಗಳನ್ನು ಕಟ್ಟಿ 10 ಮಂದಿ ಜೂಜಾಡುತ್ತಿದ್ದರು. ಕೋಳಿ ಅಂಕಕ್ಕೆ ಬಳಸಿದ ಅಂದಾಜು ₹ 15 ಸಾವಿರ, 35 ಕೋಳಿ ಹಾಗೂ ಸ್ಥಳದಲ್ಲಿದ್ದ ₹ 20,300 ನಗದು ವಶಕ್ಕೆ ಪಡೆದಿದ್ದಾರೆ.</p>.<p>ಡಿಸಿಐಬಿ ಇನ್ಸ್ಪೆಕ್ಟರ್ ಎನ್.ಕುಮಾರ್ ಆರಾಧ್ಯ, ಗ್ರಾಮಾಂತರ ಪಿಎಸ್ಐ ಎಚ್.ವಿ ಚಂದ್ರಶೇಖರ್, ಡಿ.ಸಿ.ಐ.ಬಿ ಸಿಬ್ಬಂದಿಗಳಾದ ವಿ.ಜಿ.ವೆಂಕಟೇಶ್, ಬಿ.ಎಲ್.ಯೋಗೇಶ್ ಕುಮಾರ್, ಕೆ.ಆರ್.ವಸಂತ, ಎಂ.ಎನ್.ನಿರಂಜನ, ಕೆ.ಎಸ್.ಶಶಿಕುಮಾರ್, ಸಂಪಾಜೆ ಉಪ ಠಾಣೆಯ ಎಎಸ್ಐ ಶ್ರೀಧರ್ ಅವರು ದಾಳಿಯಲ್ಲಿ ಭಾಗವಹಿಸಿದ್ದರು. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ ಇರಿಸುವಂತೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸಿದ್ದೇನೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>