‘ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಬದಲಾಗಲಿದ್ದಾರೆ, ನಿರಾಣಿ ಹೊಸ ಮುಖ್ಯಮಂತ್ರಿ ಆಗುತ್ತಾರೆ ಎಂಬ ಸುದ್ದಿ ಓಡಾಡುತ್ತಿದೆ. ಇದು ನಿಜವಲ್ಲ. ಕಳೆದ 30 ವರ್ಷಗಳಿಂದ ಬೊಮ್ಮಾಯಿ ಅವರು ರಾಜಕೀಯದಲ್ಲಿ ಪಳಗಿದ್ದಾರೆ. ಅವರ ತಂದೆಯೂ ಮುಖ್ಯಮಂತ್ರಿ ಆಗಿದ್ದರು. ಇಷ್ಟು ದೊಡ್ಡ ಹಿನ್ನೆಲೆ ಇರುವ ನಾಯಕ ಮುಖ್ಯಮಂತ್ರಿ ಆಗಿದ್ದು ನಮಗೂ ಖುಷಿಯ ಸಂಗತಿ. ನನಗೆ ಕೊಟ್ಟ ಜವಾಬ್ದಾರಿಯನ್ನು ಮಾತ್ರ ನಾನು ನಿಭಾಯಿಸುತ್ತೇನೆ’ ಎಂದು ಅವರು ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.