ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್, ‘ಮಂಗಳೂರಿನಲ್ಲಿ 60 ಕಿ.ಮೀ. ಅಂತರದಲ್ಲಿ ಮೂರು ಟೋಲ್ ಕೇಂದ್ರಗಳಿವೆ. ಸುರತ್ಕಲ್ ಟೋಲ್ ಪ್ಲಾಜಾ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದೆ. ಅದನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮೂರು ದಿನಗಳಿಂದ ಧರಣಿ ನಡೆಯುತ್ತಿದೆ. ತಕ್ಷಣ ಟೋಲ್ ಪ್ಲಾಜಾ ತೆರವು ಮಾಡಬೇಕು’ ಎಂದು ಒತ್ತಾಯಿಸಿದರು.