‘ನಮ್ಮ ವಿರುದ್ಧ ಕೇವಲ ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದರೂ ಎನ್ಐಎ ಕೋರ್ಟ್ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಆದ್ದರಿಂದ, ನಮ್ಮ ವಿರುದ್ಧದ ಪ್ರಕರಣಗಳನ್ನು ಸಾಮಾನ್ಯ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲು ನಿರ್ದೇಶಿಸಬೇಕು’ ಎಂದು ಕೋರಿದ್ದ, ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ಆರೋಪಿ ಸೈಯ್ಯದ್ ಸೊಹೆಲ್ ತೊರವಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.