‘ಕೆಪಿಟಿಸಿಎಲ್ ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ ಎಂದು ಕಲಬುರಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಒಂದು ವೇಳೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದರೆ, ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ’ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಸ್ಪಷ್ಟಪಡಿಸಿದರು. ‘ನೇಮಕಾತಿ ಪ್ರಕ್ರಿಯೆ ಇಲಾಖೆಯಿಂದ ನಡೆದರೂ ಪರೀಕ್ಷೆ ಆಯೋಜಿಸಿದ್ದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ. ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ನಡೆದಿಲ್ಲ ಎಂಬುದು ಗೊತ್ತಾಗಿದೆ. ಅಭ್ಯರ್ಥಿಗಳು ಭಯಪಡಬೇಕಿಲ್ಲ’ ಎಂದು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.‘ಅಭಿವೃದ್ಧಿ ಕುರಿತು ಚರ್ಚಿಸಲು ಕಾಂಗ್ರೆಸ್ ನಾಯಕರ ಸವಾಲು ಸ್ವೀಕರಿಸುತ್ತೇನೆ. ನನ್ನ ಇಲಾಖೆ, ಸರ್ಕಾರದ ಸಾಧನೆ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧನಿದ್ದೇನೆ’ ಎಂದರು.