ಕೊಟ್ಟ ಪ್ರಶಸ್ತಿಯನ್ನು ಹಿಂತೆಗೆದುಕೊಳ್ಳುವುದು ಸರಿಯಾದ ಕ್ರಮವಲ್ಲ. ಸಾಹಿತ್ಯ ಕ್ಷೇತ್ರದಲ್ಲಿ ಕೆಲಸ ಮಾಡಿದ ಹಿರಿಯರ ಹೆಸರಿನ ಪ್ರಶಸ್ತಿಗಳು ಇಂತಹ ಗುದ್ದಾಟಗಳಲ್ಲಿ ಅವಮಾನಕ್ಕೆ ಒಳಗಾಗಬಾರದು. ಇದು ಪರಂಪರೆಯಾಗಬಾರದು. ಇದು ಪರಿಷತ್ತಿನ ಘನತೆಗೆ ಕುಂದುತರುವಂತಹ ಕ್ರಮ. ತಕ್ಷಣ ಅವರ ಅಮಾನತು ಆದೇಶ ಹಿಂತೆಗೆದುಕೊಳ್ಳಬೇಕು ಎಂದು ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್.ಪುಷ್ಪಾ, ಹೇಮಲತಾ ಮಹಿಷಿ, ವಿಜಯಾ, ನಾಗಮಣಿ ಎಸ್.ರಾವ್, ಲೀಲಾದೇವಿ ಆರ್. ಪ್ರಸಾದ್ ಸೇರಿ ಇತರೆ 27 ಪದಾಧಿಕಾರಿಗಳು, ಸಲಹಾ ಸಮಿತಿ ಸದಸ್ಯೆಯರು ಒತ್ತಾಯಿಸಿದ್ದಾರೆ.