ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸ್ವಾಮೀಜಿ, ಚಿಕ್ಕಮಗಳೂರು, ಶಿವಮೊಗ್ಗ ಸೇರಿ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ಅತಿಯಾದ ಮಳೆಯಿಂದ ಜೀವನಾಧಾರವಾಗಿದ್ದ ಅಡಿಕೆ, ಕಾಫಿ, ಕಾಳು ಮೆಣಸಿನ ಬೆಳೆ ನೆಲಕಚ್ಚಿದೆ. ಶೇ 90ರಷ್ಟು ಬೆಳೆಗೆ ಹಾನಿಯಾಗಿದೆ. ಅದರ ಜೊತೆಯಲ್ಲಿ ಅಡಿಕೆ ಮರಗಳಿಗೆ ಹಲವು ದಶಕಗಳಿಂದ ಬಾಧಿಸುತ್ತಿರುವ ಹಳದಿ ಎಲೆ ಚುಕ್ಕೆ ರೋಗದಿಂದ ಬೆಳೆ ನಾಶವಾಗಿದೆ. ಇದರಿಂದ ಜೀವನ ನಡೆಸಲಾಗದೆ ಅಡಿಕೆ ಬೆಳೆಗಾರರ ಕುಟುಂಬಗಳು ಕಂಗಾಲಾಗಿವೆ ಎಂದು ತಿಳಿಸಿದ್ಧಾರೆ.