<p><strong>ಬೆಂಗಳೂರು: </strong>‘ಸಚಿವ ಸ್ಥಾನ ನೀಡುವುದಾಗಿ ಬಗ್ಗೆ ನಾನು ಯಾರಿಗೂ ಭರವಸೆ ಕೊಟ್ಟಿಲ್ಲ. ಸಹಜವಾಗಿ ಯಾರು ಆಗಬೇಕೋ ಅವರು ಮಂತ್ರಿ ಆಗುತ್ತಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಅವರ ಹೇಳಿಕೆಯ ಬಗ್ಗೆ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಆಕಾಂಕ್ಷಿಗಳು ಹೇಳಿಕೆಗಳನ್ನು ನೀಡುತ್ತಾರೆ. ವರಿಷ್ಠರು ಒಪ್ಪದೇ ನಾನ್ಯಾಕೆ ಯಾರಿಗಾದರೂ ಭರವಸೆ ನೀಡಲಿ’ ಎಂದು ಪ್ರಶ್ನಿಸಿದರು.</p>.<p>‘ಸಚಿವರನ್ನಾಗಿ ಮಾಡುವ ಬಗ್ಗೆಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಇನ್ನು ಎರಡು– ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ’ ಎಂದು ಶಂಕರ್ ಹೇಳಿದ್ದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ‘ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಕುರಿತು ಚರ್ಚೆ ನಡೆದಿಲ್ಲ. ಸೂಕ್ತ ಸಮಯಕ್ಕಾಗಿ ಕಾಯಬೇಕು ಎಂದು ಪಕ್ಷದ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಈಗಾಗಲೇ ಹೇಳಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸಚಿವ ಸ್ಥಾನ ನೀಡುವುದಾಗಿ ಬಗ್ಗೆ ನಾನು ಯಾರಿಗೂ ಭರವಸೆ ಕೊಟ್ಟಿಲ್ಲ. ಸಹಜವಾಗಿ ಯಾರು ಆಗಬೇಕೋ ಅವರು ಮಂತ್ರಿ ಆಗುತ್ತಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.</p>.<p>ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಅವರ ಹೇಳಿಕೆಯ ಬಗ್ಗೆ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಆಕಾಂಕ್ಷಿಗಳು ಹೇಳಿಕೆಗಳನ್ನು ನೀಡುತ್ತಾರೆ. ವರಿಷ್ಠರು ಒಪ್ಪದೇ ನಾನ್ಯಾಕೆ ಯಾರಿಗಾದರೂ ಭರವಸೆ ನೀಡಲಿ’ ಎಂದು ಪ್ರಶ್ನಿಸಿದರು.</p>.<p>‘ಸಚಿವರನ್ನಾಗಿ ಮಾಡುವ ಬಗ್ಗೆಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಇನ್ನು ಎರಡು– ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ’ ಎಂದು ಶಂಕರ್ ಹೇಳಿದ್ದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ‘ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಕುರಿತು ಚರ್ಚೆ ನಡೆದಿಲ್ಲ. ಸೂಕ್ತ ಸಮಯಕ್ಕಾಗಿ ಕಾಯಬೇಕು ಎಂದು ಪಕ್ಷದ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಈಗಾಗಲೇ ಹೇಳಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>