<p><strong>ಚನ್ನಪಟ್ಟಣ:</strong> ‘ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಪಕ್ಷದ ಹೈಕಮಾಂಡ್ಗೆ ಕೊಟ್ಟಿರುವ ವರದಿ ಬಗ್ಗೆ ನನಗೇನು ಗೊತ್ತಿಲ್ಲ’ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದರು.</p>.<p>ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಯಾವುದೇ ರಾಜಕೀಯ ವಿಚಾರ ಮಾತನಾಡುವುದಿಲ್ಲ. ಈ ಬಗ್ಗೆ ತೀರ್ಮಾನ ಮಾಡಿದ್ದೇನೆ. ಅರುಣ್ ಸಿಂಗ್ ಜೊತೆಗೆ ಚರ್ಚೆ ಮಾಡಿರುವ ವಿಚಾರವನ್ನು ಮಾಧ್ಯಮದ ಮುಂದೆ ಮಾತನಾಡುವುದಿಲ್ಲ’ ಎಂದರು.</p>.<p>‘ಪಕ್ಷದ ಮೂರು ಮಂದಿ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವ ವಿಚಾರದ ಬಗ್ಗೆಯೂ ನನಗೆ ಗೊತ್ತಿಲ್ಲ. ಪಕ್ಷದ ಹಿರಿಯರು ಇದರ ಬಗ್ಗೆ ತೀರ್ಮಾನ ಮಾಡುತ್ತಾರೆ. ಪಕ್ಷ ಏನು ಮಾಡಲಿದೆ ಎನ್ನುವುದನ್ನು ಕಾದು ನೋಡುತ್ತೇನೆ’ ಎಂದರು.</p>.<p>ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ: ಕೋವಿಡ್ ವ್ಯಾಕ್ಸಿನ್ ವಿಚಾರವಾಗಿ ಕಾಂಗ್ರೆಸ್ ನಾಯಕರು ಸಾಕಷ್ಟು ಅಪಪ್ರಚಾರ ಮಾಡಿದರು. ಈಗ ಅವರ ಮನೆಯವರೆ ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ವರ್ ವಾಗ್ದಾಳಿ ನಡೆಸಿದರು.</p>.<p>ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರಂತಹ ಕಾಂಗ್ರೆಸ್ ಧುರೀಣರು ವ್ಯಾಕ್ಸಿನ್ ಬಗ್ಗೆ ಅಪಪ್ರಚಾರ ಮಾಡಿದರು. ಆದರೆ, ಈಗ ಜನರಿಗೆ ಎಲ್ಲವೂ ಗೊತ್ತಾಗಿದೆ. ಹಾಗಾಗಿ, ಜನರೇ ಆಸ್ಪತ್ರೆಗಳಿಗೆ ಬಂದು ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿದ್ದಾರೆ ಎಂದರು.</p>.<p>ರಾಜ್ಯದಲ್ಲಿ ಕೋವಿಡ್ನಿಂದ ಸಾವು, ನೋವು ಆಗಲು ಕಾಂಗ್ರೆಸ್ಸಿಗರ ಅಪಪ್ರಚಾರವೇ ಕಾರಣ. ಸೂಕ್ತ ಸಮಯದಲ್ಲಿ ಜನತೆ ವ್ಯಾಕ್ಸಿನ್ ತೆಗೆದುಕೊಂಡಿದ್ದರೆ ಸಾವು, ನೋವಿನ ಪ್ರಮಾಣ ಕಡಿಮೆಯಾಗುತ್ತಿತ್ತು. ಕಾಂಗ್ರೆಸ್ ನಾಯಕರ ಅಪಪ್ರಚಾರದಿಂದಾಗಿ ಜನತೆ ವ್ಯಾಕ್ಸಿನ್ ತೆಗೆದುಕೊಳ್ಳಲು ಹಿಂಜರಿದರು. ಇದರಿಂದ ಸಾವಿನ ಪ್ರಮಾಣದಲ್ಲಿ ಏರಿಕೆಯಾಯಿತು. ಕಾಂಗ್ರೆಸ್ ನಾಯಕರು ಈ ಪಾಪದ ಮೂಟೆ ಹೊರುತ್ತಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ‘ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಪಕ್ಷದ ಹೈಕಮಾಂಡ್ಗೆ ಕೊಟ್ಟಿರುವ ವರದಿ ಬಗ್ಗೆ ನನಗೇನು ಗೊತ್ತಿಲ್ಲ’ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದರು.</p>.<p>ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಯಾವುದೇ ರಾಜಕೀಯ ವಿಚಾರ ಮಾತನಾಡುವುದಿಲ್ಲ. ಈ ಬಗ್ಗೆ ತೀರ್ಮಾನ ಮಾಡಿದ್ದೇನೆ. ಅರುಣ್ ಸಿಂಗ್ ಜೊತೆಗೆ ಚರ್ಚೆ ಮಾಡಿರುವ ವಿಚಾರವನ್ನು ಮಾಧ್ಯಮದ ಮುಂದೆ ಮಾತನಾಡುವುದಿಲ್ಲ’ ಎಂದರು.</p>.<p>‘ಪಕ್ಷದ ಮೂರು ಮಂದಿ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವ ವಿಚಾರದ ಬಗ್ಗೆಯೂ ನನಗೆ ಗೊತ್ತಿಲ್ಲ. ಪಕ್ಷದ ಹಿರಿಯರು ಇದರ ಬಗ್ಗೆ ತೀರ್ಮಾನ ಮಾಡುತ್ತಾರೆ. ಪಕ್ಷ ಏನು ಮಾಡಲಿದೆ ಎನ್ನುವುದನ್ನು ಕಾದು ನೋಡುತ್ತೇನೆ’ ಎಂದರು.</p>.<p>ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ: ಕೋವಿಡ್ ವ್ಯಾಕ್ಸಿನ್ ವಿಚಾರವಾಗಿ ಕಾಂಗ್ರೆಸ್ ನಾಯಕರು ಸಾಕಷ್ಟು ಅಪಪ್ರಚಾರ ಮಾಡಿದರು. ಈಗ ಅವರ ಮನೆಯವರೆ ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಯೋಗೇಶ್ವರ್ ವಾಗ್ದಾಳಿ ನಡೆಸಿದರು.</p>.<p>ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರಂತಹ ಕಾಂಗ್ರೆಸ್ ಧುರೀಣರು ವ್ಯಾಕ್ಸಿನ್ ಬಗ್ಗೆ ಅಪಪ್ರಚಾರ ಮಾಡಿದರು. ಆದರೆ, ಈಗ ಜನರಿಗೆ ಎಲ್ಲವೂ ಗೊತ್ತಾಗಿದೆ. ಹಾಗಾಗಿ, ಜನರೇ ಆಸ್ಪತ್ರೆಗಳಿಗೆ ಬಂದು ವ್ಯಾಕ್ಸಿನ್ ಹಾಕಿಸಿಕೊಳ್ಳುತ್ತಿದ್ದಾರೆ ಎಂದರು.</p>.<p>ರಾಜ್ಯದಲ್ಲಿ ಕೋವಿಡ್ನಿಂದ ಸಾವು, ನೋವು ಆಗಲು ಕಾಂಗ್ರೆಸ್ಸಿಗರ ಅಪಪ್ರಚಾರವೇ ಕಾರಣ. ಸೂಕ್ತ ಸಮಯದಲ್ಲಿ ಜನತೆ ವ್ಯಾಕ್ಸಿನ್ ತೆಗೆದುಕೊಂಡಿದ್ದರೆ ಸಾವು, ನೋವಿನ ಪ್ರಮಾಣ ಕಡಿಮೆಯಾಗುತ್ತಿತ್ತು. ಕಾಂಗ್ರೆಸ್ ನಾಯಕರ ಅಪಪ್ರಚಾರದಿಂದಾಗಿ ಜನತೆ ವ್ಯಾಕ್ಸಿನ್ ತೆಗೆದುಕೊಳ್ಳಲು ಹಿಂಜರಿದರು. ಇದರಿಂದ ಸಾವಿನ ಪ್ರಮಾಣದಲ್ಲಿ ಏರಿಕೆಯಾಯಿತು. ಕಾಂಗ್ರೆಸ್ ನಾಯಕರು ಈ ಪಾಪದ ಮೂಟೆ ಹೊರುತ್ತಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>