ರಾಜ್ಯದಲ್ಲಿ ಕೋವಿಡ್ನಿಂದ ಸಾವು, ನೋವು ಆಗಲು ಕಾಂಗ್ರೆಸ್ಸಿಗರ ಅಪಪ್ರಚಾರವೇ ಕಾರಣ. ಸೂಕ್ತ ಸಮಯದಲ್ಲಿ ಜನತೆ ವ್ಯಾಕ್ಸಿನ್ ತೆಗೆದುಕೊಂಡಿದ್ದರೆ ಸಾವು, ನೋವಿನ ಪ್ರಮಾಣ ಕಡಿಮೆಯಾಗುತ್ತಿತ್ತು. ಕಾಂಗ್ರೆಸ್ ನಾಯಕರ ಅಪಪ್ರಚಾರದಿಂದಾಗಿ ಜನತೆ ವ್ಯಾಕ್ಸಿನ್ ತೆಗೆದುಕೊಳ್ಳಲು ಹಿಂಜರಿದರು. ಇದರಿಂದ ಸಾವಿನ ಪ್ರಮಾಣದಲ್ಲಿ ಏರಿಕೆಯಾಯಿತು. ಕಾಂಗ್ರೆಸ್ ನಾಯಕರು ಈ ಪಾಪದ ಮೂಟೆ ಹೊರುತ್ತಾರೆ ಎಂದರು.