ಮೀಸಲಾತಿ ಆಗ್ರಹಿಸಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸುವುದಾಗಿ ನೀಡಿರುವ ಹೇಳಿಕೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ‘ಯತ್ನಾಳ್ ಜತೆ ಈಗಾಗಲೇ ಮಾತನಾಡಿದ್ದೇನೆ. ಮೀಸಲಾತಿಗೆ ಸಂಬಂಧಿಸಿದಂತೆ ಸಮಿತಿಯನ್ನೂ ರಚಿಸಿದ್ದೇವೆ. ಹೀಗಾಗಿ, ಪ್ರತಿಭಟನೆ ಬೇಡವೆಂದು ಮನವಿ ಮಾಡಿದ್ದೇನೆ. ಮತ್ತೆ ಮಾತನಾಡುತ್ತೇವೆ. ಮೀಸಲಾತಿ ವಿಚಾರದಲ್ಲಿ ಈಗಾಗಲೇ ವಸ್ತುಸ್ಥಿತಿಯನ್ನು ವಿಧಾನಸಭೆಯಲ್ಲಿ ಹೇಳಿದ್ದೇನೆ’ ಎಂದರು.