ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸಿಗರು ಎಂದೂ ಮುಖ್ಯಮಂತ್ರಿ ಆಗುವುದಿಲ್ಲ: ಕೆ.ಎಸ್‌ ಈಶ್ವರಪ್ಪ

Last Updated 23 ಜನವರಿ 2021, 10:09 IST
ಅಕ್ಷರ ಗಾತ್ರ

ಧಾರವಾಡ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಪೈಪೋಟಿಯಲ್ಲಿ ಹಗಲುಗನಸು ಕಾಣುತ್ತಿದ್ದಾರೆ. ಆದರೆ ಭವಿಷ್ಯದಲ್ಲಿ ಯಾವ ಕಾಂಗ್ರೆಸಿಗರೂ ರಾಜ್ಯದಲ್ಲಿ ಮುಖ್ಯಮಂತ್ರಿ ಆಗುವುದಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು.

ಜಿಲ್ಲಾ ಪಂಚಾಯ್ತಿಯ ನೂತನ ಕಟ್ಟಡ ಉದ್ಘಾಟಿಸಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂದಿನ ಮುಖ್ಯಮಂತ್ರಿ ನಾನೇ ಎಂದೆನ್ನುವ ಸಿದ್ದರಾಮಯ್ಯ ಅವರದ್ದು ಸರ್ವಾಧಿಕಾರಿ ಧೋರಣೆ. ಪಕ್ಷದ ಹೈಕಮಾಂಡ್‌ ಹಾಗೂ ಅಲ್ಲಿನ ನಾಯಕರು ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಒಂದು ಪಕ್ಷದಲ್ಲಿದ್ದ ಅಭ್ಯಾಸವಿಲ್ಲದ ಸಿದ್ದರಾಮಯ್ಯ ವಿರುದ್ಧ ಡಿ.ಕೆ.ಶಿವಕುಮಾರ ಅವರಿಗೆ ‘ಧಂ’ ಇದ್ದರೆ ಕ್ರಮ ತೆಗೆದುಕೊಳ್ಳಲಿ’ ಎಂದು ಸವಾಲೆಸೆದರು.

’ಕಾಂಗ್ರೆಸ್ ಒಂದು ಮುಳುಗುವ ಹಡಗಾಗಿದ್ದು, ಅದರಲ್ಲಿರುವ ಹಲವರು ತಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಅಲ್ಲಿಂದ ಹೊರಗೆ ಬರುತ್ತಿದ್ದಾರೆ. ಅವರಲ್ಲಿ ಹಲವರು ಬಿಜೆಪಿ ಸೇರುತ್ತಿದ್ದಾರೆ’ ಎಂದು ಈಶ್ವರಪ್ಪ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT