ಜಿಲ್ಲಾ ಪಂಚಾಯ್ತಿಯ ನೂತನ ಕಟ್ಟಡ ಉದ್ಘಾಟಿಸಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂದಿನ ಮುಖ್ಯಮಂತ್ರಿ ನಾನೇ ಎಂದೆನ್ನುವ ಸಿದ್ದರಾಮಯ್ಯ ಅವರದ್ದು ಸರ್ವಾಧಿಕಾರಿ ಧೋರಣೆ. ಪಕ್ಷದ ಹೈಕಮಾಂಡ್ ಹಾಗೂ ಅಲ್ಲಿನ ನಾಯಕರು ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಒಂದು ಪಕ್ಷದಲ್ಲಿದ್ದ ಅಭ್ಯಾಸವಿಲ್ಲದ ಸಿದ್ದರಾಮಯ್ಯ ವಿರುದ್ಧ ಡಿ.ಕೆ.ಶಿವಕುಮಾರ ಅವರಿಗೆ ‘ಧಂ’ ಇದ್ದರೆ ಕ್ರಮ ತೆಗೆದುಕೊಳ್ಳಲಿ’ ಎಂದು ಸವಾಲೆಸೆದರು.