‘ಕುಮಾರಸ್ವಾಮಿ ಅವರ ರೀತಿ ತಾವು ದಿನಕ್ಕೆರಡು ಬಾರಿ ಕ್ಯಾಮರಾ ಮುಂದೆ ಬರಲು ಆಗುತ್ತದೆಯೇ’ ಎಂಬ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಟೀಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ‘ನನ್ನ ಪ್ರಕಾರ ಇಂತಹ ಗೃಹ ಸಚಿವರು ಈವರೆಗೆ ಬರಲೇ ಇಲ್ಲ. ಪಾಪ ಅವರು; ಜನರ ಕಷ್ಟ ಕೇಳಲು ನಿದ್ದೆ ಕೂಡ ಮಾಡುತ್ತಿಲ್ಲ ಅನಿಸುತ್ತಿದೆ. ಅವರ ಶಿವಮೊಗ್ಗ ಜಿಲ್ಲೆ ಹೇಗಿದೆ, ಅಡಿಕೆ ಬೆಳೆಗಾರರು ಹೇಗಿದ್ದಾರೆ, ಅವರ ಕಷ್ಟ ಸುಖ ವಿಚಾರ ಮಾಡಿದ್ದೀರಾ ಜ್ಞಾನೇಂದ್ರ ಅವರೇ’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.