ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಸಹಿತ ಯಾರು ಮುಖ್ಯಮಂತ್ರಿ ಎಂಬುದನ್ನು ಕಾಲ ನಿರ್ಧರಿಸುತ್ತದೆ. ಕಾಂಗ್ರೆಸ್ನವರೇ ಮುಖ್ಯಮಂತ್ರಿ ಆಗುತ್ತಾರೆ ಎಂಬುದಷ್ಟೇ ನಿಜ. ಡಿಕೆಶಿ, ಸಿದ್ದರಾಮಯ್ಯ ಅವರ ಬೆಂಬಲಿಗರು ಕೂಗಾಡೋದು ನಿಲ್ಲಿಸಬೇಕು. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಗೆ ಹೋಗಬೇಕು. ಈಗ ಗೊಂದಲ ಸೃಷ್ಟಿಸುವುದು ಬೇಡ ಎಂದು ಸಲಹೆ ನೀಡಿದರು.