<p><strong>ಬೆಂಗಳೂರು:</strong> ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಬಿಜೆಪಿರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.</p>.<p>ಕುಮಾರಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವರು, ಶಾಸಕರ ಮಧ್ಯೆ ಯಾವುದೇ ಭಿನ್ನಮತವಿಲ್ಲ. ಯಾವುದೇ ಶಾಸಕರಿಗೆ ಏನಾದರೂ ಹೇಳುವುದಿದ್ದರೆ, ವೈಯಕ್ತಿಕವಾಗಿ ನನ್ನ ಬಳಿ ಹೇಳಿಕೊಳ್ಳಬಹುದು. ಮಾಧ್ಯಮಗಳ ಮುಂದೆ ಮಾತನಾಡಬಾರದು ಎಂದು ತಿಳಿಸಿದರು.</p>.<p>ಕೋವಿಡ್ ಸಂದರ್ಭದಲ್ಲಿ ಮುಖ್ಯಮಂತ್ರಿಯಿಂದ ಹಿಡಿದು ಎಲ್ಲ ಸಚಿವರು ಹಗಲು ರಾತ್ರಿ ಎನ್ನದೇ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕೋವಿಡ್ನಿಂದ ಮೃತಪಟ್ಟ ಬಡ ಕುಟುಂಬಗಳಿಗೆ ತಲಾ ₹1 ಲಕ್ಷ ನೀಡುವ ಯೋಜನೆ ದೇಶದಲ್ಲೇ ಪ್ರಥಮ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಬಿಜೆಪಿರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.</p>.<p>ಕುಮಾರಕೃಪಾ ಅತಿಥಿ ಗೃಹದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಚಿವರು, ಶಾಸಕರ ಮಧ್ಯೆ ಯಾವುದೇ ಭಿನ್ನಮತವಿಲ್ಲ. ಯಾವುದೇ ಶಾಸಕರಿಗೆ ಏನಾದರೂ ಹೇಳುವುದಿದ್ದರೆ, ವೈಯಕ್ತಿಕವಾಗಿ ನನ್ನ ಬಳಿ ಹೇಳಿಕೊಳ್ಳಬಹುದು. ಮಾಧ್ಯಮಗಳ ಮುಂದೆ ಮಾತನಾಡಬಾರದು ಎಂದು ತಿಳಿಸಿದರು.</p>.<p>ಕೋವಿಡ್ ಸಂದರ್ಭದಲ್ಲಿ ಮುಖ್ಯಮಂತ್ರಿಯಿಂದ ಹಿಡಿದು ಎಲ್ಲ ಸಚಿವರು ಹಗಲು ರಾತ್ರಿ ಎನ್ನದೇ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕೋವಿಡ್ನಿಂದ ಮೃತಪಟ್ಟ ಬಡ ಕುಟುಂಬಗಳಿಗೆ ತಲಾ ₹1 ಲಕ್ಷ ನೀಡುವ ಯೋಜನೆ ದೇಶದಲ್ಲೇ ಪ್ರಥಮ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>