ಪಕ್ಷದ ವರಿಷ್ಠರಿಗೆ ಬರೆದಿರುವ ಪತ್ರದ ಕುರಿತು ಗುರುವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ‘ನನ್ನ ಇಲಾಖೆಗೆ ಸಂಬಂಧಪಟ್ಟ ವಿಚಾರಗಳನ್ನು ಹೇಳಿಕೊಂಡಿದ್ದೇನೆ. ಇದರಲ್ಲಿ ಅಸಮಾಧಾನದ ಪ್ರಶ್ನೆಯೇ ಇಲ್ಲ. ಇಲಾಖೆಯ ವಿಚಾರಗಳನ್ನು ಚರ್ಚಿಸಲು ರಾಜ್ಯಪಾಲರ ಬಳಿಯಷ್ಟೇ ಅಲ್ಲ; ದೆಹಲಿಗೂ ಹೋಗುತ್ತೇನೆ. ಇದರಲ್ಲೇನೂ ವಿಶೇಷವಿಲ್ಲ’ ಎಂದು ಹೇಳಿದರು.