<p><strong>ಕಲಬುರ್ಗಿ: </strong>ಲಾಕ್ಡೌನ್ ಸಂದರ್ಭ ದಲ್ಲಿನಿರ್ಗತಿಕರು, ಬಡವರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಉಚಿತ ಊಟ ಕೊಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೂ ಕಲಬುರ್ಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮೊದಲ ದಿನಈ ಆದೇಶ ಪಾಲನೆಯಾಗಲಿಲ್ಲ.</p>.<p>ಕಲಬುರ್ಗಿ ನಗರದ 7 ಇಂದಿರಾ ಕ್ಯಾಂಟೀನ್ಗಳಲ್ಲಿ ರಿಯಾಯಿತಿ ದರದಂತೆ ಹಣ ಪಡೆದೇ ಊಟ, ಉಪಾಹಾರ ನೀಡುತ್ತಿರುವುದು ‘ಪ್ರಜಾವಾಣಿ’ ಪ್ರತಿನಿಧಿ ಕೆಲವು ಕ್ಯಾಂಟೀನ್ಗಳಿಗೆ ತೆರಳಿ ರಿಯಾಲಿಟಿ ಚೆಕ್ ನಡೆಸಿದಾಗ ಕಂಡು ಬಂತು.</p>.<p>‘ಕಲಬುರ್ಗಿ ಮಹಾನಗರ ಪಾಲಿಕೆ 19 ತಿಂಗಳಿಂದ₹ 7.5 ಕೋಟಿ ಬಾಕಿ ಉಳಿಸಿಕೊಂಡಿದ್ದು, ಅದು ಪಾವತಿ ಆಗುವವರೆಗೆ ಉಚಿತವಾಗಿ ಊಟ ಕೊಡಲು ಆಗುವುದಿಲ್ಲ.ಸದ್ಯಕ್ಕೆ 5 ತಿಂಗಳ ಬಾಕಿಯನ್ನಾದರೂ ನೀಡಬೇಕು ಎಂದು ಒತ್ತಾಯಿಸಿದ್ದೇವೆ. ಬಾಕಿ ನೀಡದಿ ದ್ದರೆ ಕ್ಯಾಂಟೀನ್ ಬಂದ್ ಮಾಡುತ್ತೇವೆ’ ಎಂದುಕ್ಯಾಂಟೀನ್ ನಿರ್ವಹಣೆಯ ಗುತ್ತಿಗೆದಾರರು ಬೆಳಿಗ್ಗೆ ಹೇಳಿದರು.</p>.<p>ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಮಧ್ಯಪ್ರವೇಶಿಸಿದ ನಂತರ, ಮಹಾನಗರ ಪಾಲಿಕೆ ಆಯುಕ್ತರುಗುತ್ತಿಗೆದಾರ<br />ರೊಂದಿಗೆ ಚರ್ಚಿಸಿ ಮನವೊಲಿಸಿದರು.ಮೇ 13ರಿಂದ ಉಪಾಹಾರ, ಊಟವನ್ನು ಉಚಿತವಾಗಿ ನೀಡಲು ಗುತ್ತಿಗೆದಾರರು<br />ಸಮ್ಮತಿಸಿದರು.</p>.<p>‘ರಾಯಚೂರು ಜಿಲ್ಲೆಯಲ್ಲಿ 8 ಇಂದಿರಾ ಕ್ಯಾಂಟೀನ್ಗಳಿವೆ. ಉಚಿತ ಆಹಾರ ನೀಡುವಂತೆ ಸ್ಥಳೀಯ ಸಂಸ್ಥೆಗಳಿಂದ ಸೂಚನೆ ಬಂದಿಲ್ಲ. ಹೀಗಾಗಿ ಎಂದಿನಂತೆ ಹಣ ಪಡೆಯುತ್ತಿದ್ದೇವೆ’ ಎಂದು ಕ್ಯಾಂಟೀನ್ನ ಗುತ್ತಿಗೆದಾರರೊಬ್ಬರು ಮಾಹಿತಿ ನೀಡಿದರು.</p>.<p>‘ದೇವದುರ್ಗದ ಒಂದು ಕ್ಯಾಂಟೀನ್ನಲ್ಲಿ ಉಚಿತವಾಗಿ ಊಟ–ಉಪಾಹಾರ ನೀಡಲಾಗಿದೆ. ಉಳಿದೆಡೆ ಏಕೆ ಈ ಆದೇಶ ಪಾಲನೆಯಾಗಿಲ್ಲ ಎಂಬು ದನ್ನು ಪರಿಶೀಲಿಸುತ್ತೇನೆ’ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್<br />ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಲಾಕ್ಡೌನ್ ಸಂದರ್ಭ ದಲ್ಲಿನಿರ್ಗತಿಕರು, ಬಡವರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಉಚಿತ ಊಟ ಕೊಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದರೂ ಕಲಬುರ್ಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮೊದಲ ದಿನಈ ಆದೇಶ ಪಾಲನೆಯಾಗಲಿಲ್ಲ.</p>.<p>ಕಲಬುರ್ಗಿ ನಗರದ 7 ಇಂದಿರಾ ಕ್ಯಾಂಟೀನ್ಗಳಲ್ಲಿ ರಿಯಾಯಿತಿ ದರದಂತೆ ಹಣ ಪಡೆದೇ ಊಟ, ಉಪಾಹಾರ ನೀಡುತ್ತಿರುವುದು ‘ಪ್ರಜಾವಾಣಿ’ ಪ್ರತಿನಿಧಿ ಕೆಲವು ಕ್ಯಾಂಟೀನ್ಗಳಿಗೆ ತೆರಳಿ ರಿಯಾಲಿಟಿ ಚೆಕ್ ನಡೆಸಿದಾಗ ಕಂಡು ಬಂತು.</p>.<p>‘ಕಲಬುರ್ಗಿ ಮಹಾನಗರ ಪಾಲಿಕೆ 19 ತಿಂಗಳಿಂದ₹ 7.5 ಕೋಟಿ ಬಾಕಿ ಉಳಿಸಿಕೊಂಡಿದ್ದು, ಅದು ಪಾವತಿ ಆಗುವವರೆಗೆ ಉಚಿತವಾಗಿ ಊಟ ಕೊಡಲು ಆಗುವುದಿಲ್ಲ.ಸದ್ಯಕ್ಕೆ 5 ತಿಂಗಳ ಬಾಕಿಯನ್ನಾದರೂ ನೀಡಬೇಕು ಎಂದು ಒತ್ತಾಯಿಸಿದ್ದೇವೆ. ಬಾಕಿ ನೀಡದಿ ದ್ದರೆ ಕ್ಯಾಂಟೀನ್ ಬಂದ್ ಮಾಡುತ್ತೇವೆ’ ಎಂದುಕ್ಯಾಂಟೀನ್ ನಿರ್ವಹಣೆಯ ಗುತ್ತಿಗೆದಾರರು ಬೆಳಿಗ್ಗೆ ಹೇಳಿದರು.</p>.<p>ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಮಧ್ಯಪ್ರವೇಶಿಸಿದ ನಂತರ, ಮಹಾನಗರ ಪಾಲಿಕೆ ಆಯುಕ್ತರುಗುತ್ತಿಗೆದಾರ<br />ರೊಂದಿಗೆ ಚರ್ಚಿಸಿ ಮನವೊಲಿಸಿದರು.ಮೇ 13ರಿಂದ ಉಪಾಹಾರ, ಊಟವನ್ನು ಉಚಿತವಾಗಿ ನೀಡಲು ಗುತ್ತಿಗೆದಾರರು<br />ಸಮ್ಮತಿಸಿದರು.</p>.<p>‘ರಾಯಚೂರು ಜಿಲ್ಲೆಯಲ್ಲಿ 8 ಇಂದಿರಾ ಕ್ಯಾಂಟೀನ್ಗಳಿವೆ. ಉಚಿತ ಆಹಾರ ನೀಡುವಂತೆ ಸ್ಥಳೀಯ ಸಂಸ್ಥೆಗಳಿಂದ ಸೂಚನೆ ಬಂದಿಲ್ಲ. ಹೀಗಾಗಿ ಎಂದಿನಂತೆ ಹಣ ಪಡೆಯುತ್ತಿದ್ದೇವೆ’ ಎಂದು ಕ್ಯಾಂಟೀನ್ನ ಗುತ್ತಿಗೆದಾರರೊಬ್ಬರು ಮಾಹಿತಿ ನೀಡಿದರು.</p>.<p>‘ದೇವದುರ್ಗದ ಒಂದು ಕ್ಯಾಂಟೀನ್ನಲ್ಲಿ ಉಚಿತವಾಗಿ ಊಟ–ಉಪಾಹಾರ ನೀಡಲಾಗಿದೆ. ಉಳಿದೆಡೆ ಏಕೆ ಈ ಆದೇಶ ಪಾಲನೆಯಾಗಿಲ್ಲ ಎಂಬು ದನ್ನು ಪರಿಶೀಲಿಸುತ್ತೇನೆ’ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್<br />ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>