ಈ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ‘ಹಿಂದೆಲ್ಲ ವಾರ್ಷಿಕ ₹4 ಕೋಟಿ ಯಿಂದ ₹5 ಕೋಟಿ ನೀಡಲಾಗುತ್ತಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ಅನುದಾನವನ್ನು ₹50 ಲಕ್ಷಕ್ಕೆ ಇಳಿಸಲಾಗಿದ್ದು, ₹25 ಲಕ್ಷ ಮಾತ್ರ ಬಿಡುಗಡೆ ಮಾಡಲಾಗಿದೆ. ಕನ್ನಡಕ್ಕಾಗಿ ದುಡಿಯುತ್ತಿರುವ, ಕನ್ನಡದ ಜ್ಞಾನವನ್ನು ವಿಸ್ತರಿಸುವ ಸಂಸ್ಥೆಗಳ ಬಗ್ಗೆ ನಿರ್ಲಕ್ಷ್ಯ ತೋರಿ ರುವುದಕ್ಕೆ ಇದಕ್ಕಿಂತ ನಿದರ್ಶನ ಬೇಕೆ’ ಎಂದು ಪ್ರಶ್ನಿಸಿದ್ದಾರೆ.