<p><strong>ಕೊಪ್ಪಳ:</strong> ‘ಕಾಂಗ್ರೆಸ್ನಲ್ಲಿ ಬಣಗಳಿಲ್ಲ. ಭಿನ್ನಾಭಿಪ್ರಾಯ,ಒಡಕಿನ ಮಾತೇ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನನಗೆ ತಿಳಿಸಿಯೇ ದೆಹಲಿಗೆ ತೆರಳಿದ್ದು, ನಮ್ಮ ಪಕ್ಷದ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರನ್ನು ಭೇಟಿಯಾಗುವರು’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>‘ಚುನಾವಣೆ ಇನ್ನೂ ದೂರವಿದೆ. ಚುನಾವಣೆ ನಡೆದು ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಆಯ್ಕೆ ಕುರಿತು ಎಲ್ಲರ ಅಭಿಪ್ರಾಯ ಪಡೆಯಲಾಗುತ್ತದೆ. ಕೆಲವರು ನನ್ನನ್ನೇ ಮುಖ್ಯಮಂತ್ರಿ ಮಾಡಬೇಕೆಂದು ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ’ ಎಂದು ಸೋಮವಾರ ಇಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<p class="Subhead">ಸಿದ್ದು ಮುಂದಿನ ಸಿಎಂ:ಕೊರೊನಾದಿಂದ ಸಂಕಷ್ಟಕ್ಕೀಡಾದವರಿಗೆ ಆಹಾರ ಧಾನ್ಯದ ಕಿಟ್ ವಿತರಿಸಲು ಶಾಸಕರಾಘವೇಂದ್ರ ಹಿಟ್ನಾಳ ಸಮಾರಂಭ ಏರ್ಪಡಿಸಿದ್ದರು.</p>.<p>ಸಿದ್ದರಾಮಯ್ಯ ಅವರೂ ಪಾಲ್ಗೊಂಡಿದ್ದ ಈ ಸಮಾರಂಭದಲ್ಲಿ ಮಾತನಾಡಿದ ರಾಘವೇಂದ್ರ, ‘ಅನ್ನಭಾಗ್ಯದ ಮೂಲಕ ಬಡವರ ಹಸಿವು ನೀಗಿಸಿದ ನಾಯಕ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಬೇಕು. ನೀವು ಬೆಂಬಲಿಸಬೇಕು’ ಎಂದು ಜನರಿಗೆ ಮನವಿ ಮಾಡಿದರು.</p>.<p>ವೇದಿಕೆಯಲ್ಲಿದ್ದ ಹೆಬ್ಬಾಳ ಶಾಸಕ ಭೈರತಿ ಸುರೇಶ ಅವರು ರಾಘವೇಂದ್ರ ಹಿಟ್ನಾಳ ಬಳಿ ಬಂದು, ಕಿವಿಯಲ್ಲಿ ಏನೋ ಹೇಳಿದರು. ನಂತರ ರಾಘವೇಂದ್ರ ಅವರ ಮಾತಿನ ಧಾಟಿ ಬದಲಾಯಿತು.</p>.<p>ಶಾಸಕ ಜಮೀರ್ ಅಹಮದ್ ಖಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರೂ ಮಾತನಾಡಲಿಲ್ಲ.</p>.<p class="Subhead">‘ಬಿಎಸ್ವೈ ಬದಲಾವಣೆ ಖಚಿತ’: ‘ಬಿಜೆಪಿಯಲ್ಲಿ ಗೊಂದಲಗಳಿದ್ದು, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ನಿಶ್ಚಿತ’ ಎಂದು ಸಿದ್ದರಾಮಯ್ಯ ತಿಳಿಸಿದರು.</p>.<p>‘ಬಿಜೆಪಿ ಶಾಸಕ ಅರವಿಂದ ಬೆಲ್ಲದ ತಮ್ಮ ಫೋನ್ ಕದ್ದಾಲಿಕೆಯಾಗುತ್ತಿದೆ ಎಂದು ಹೇಳಿದ್ದಾರೆ. ಹೀಗಾಗಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದೇನೆ. ನೀರಾವರಿ ಇಲಾಖೆ ಟೆಂಡರ್ನಲ್ಲಿ ₹2 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆದಿರುವ ಬಗ್ಗೆ ಬಿಜೆಪಿಯ ಎಚ್.ವಿಶ್ವನಾಥ ಅವರೇ ಆರೋಪಿಸಿದ್ದಾರೆ. ಇವು ನಾವು ಮಾಡಿದ ಆರೋಪಗಳಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ‘ಕಾಂಗ್ರೆಸ್ನಲ್ಲಿ ಬಣಗಳಿಲ್ಲ. ಭಿನ್ನಾಭಿಪ್ರಾಯ,ಒಡಕಿನ ಮಾತೇ ಇಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನನಗೆ ತಿಳಿಸಿಯೇ ದೆಹಲಿಗೆ ತೆರಳಿದ್ದು, ನಮ್ಮ ಪಕ್ಷದ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಅವರನ್ನು ಭೇಟಿಯಾಗುವರು’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.</p>.<p>‘ಚುನಾವಣೆ ಇನ್ನೂ ದೂರವಿದೆ. ಚುನಾವಣೆ ನಡೆದು ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಮುಖ್ಯಮಂತ್ರಿ ಆಯ್ಕೆ ಕುರಿತು ಎಲ್ಲರ ಅಭಿಪ್ರಾಯ ಪಡೆಯಲಾಗುತ್ತದೆ. ಕೆಲವರು ನನ್ನನ್ನೇ ಮುಖ್ಯಮಂತ್ರಿ ಮಾಡಬೇಕೆಂದು ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ’ ಎಂದು ಸೋಮವಾರ ಇಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.</p>.<p class="Subhead">ಸಿದ್ದು ಮುಂದಿನ ಸಿಎಂ:ಕೊರೊನಾದಿಂದ ಸಂಕಷ್ಟಕ್ಕೀಡಾದವರಿಗೆ ಆಹಾರ ಧಾನ್ಯದ ಕಿಟ್ ವಿತರಿಸಲು ಶಾಸಕರಾಘವೇಂದ್ರ ಹಿಟ್ನಾಳ ಸಮಾರಂಭ ಏರ್ಪಡಿಸಿದ್ದರು.</p>.<p>ಸಿದ್ದರಾಮಯ್ಯ ಅವರೂ ಪಾಲ್ಗೊಂಡಿದ್ದ ಈ ಸಮಾರಂಭದಲ್ಲಿ ಮಾತನಾಡಿದ ರಾಘವೇಂದ್ರ, ‘ಅನ್ನಭಾಗ್ಯದ ಮೂಲಕ ಬಡವರ ಹಸಿವು ನೀಗಿಸಿದ ನಾಯಕ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಬೇಕು. ನೀವು ಬೆಂಬಲಿಸಬೇಕು’ ಎಂದು ಜನರಿಗೆ ಮನವಿ ಮಾಡಿದರು.</p>.<p>ವೇದಿಕೆಯಲ್ಲಿದ್ದ ಹೆಬ್ಬಾಳ ಶಾಸಕ ಭೈರತಿ ಸುರೇಶ ಅವರು ರಾಘವೇಂದ್ರ ಹಿಟ್ನಾಳ ಬಳಿ ಬಂದು, ಕಿವಿಯಲ್ಲಿ ಏನೋ ಹೇಳಿದರು. ನಂತರ ರಾಘವೇಂದ್ರ ಅವರ ಮಾತಿನ ಧಾಟಿ ಬದಲಾಯಿತು.</p>.<p>ಶಾಸಕ ಜಮೀರ್ ಅಹಮದ್ ಖಾನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರೂ ಮಾತನಾಡಲಿಲ್ಲ.</p>.<p class="Subhead">‘ಬಿಎಸ್ವೈ ಬದಲಾವಣೆ ಖಚಿತ’: ‘ಬಿಜೆಪಿಯಲ್ಲಿ ಗೊಂದಲಗಳಿದ್ದು, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾವಣೆ ನಿಶ್ಚಿತ’ ಎಂದು ಸಿದ್ದರಾಮಯ್ಯ ತಿಳಿಸಿದರು.</p>.<p>‘ಬಿಜೆಪಿ ಶಾಸಕ ಅರವಿಂದ ಬೆಲ್ಲದ ತಮ್ಮ ಫೋನ್ ಕದ್ದಾಲಿಕೆಯಾಗುತ್ತಿದೆ ಎಂದು ಹೇಳಿದ್ದಾರೆ. ಹೀಗಾಗಿ ತನಿಖೆ ನಡೆಸುವಂತೆ ಒತ್ತಾಯಿಸಿದ್ದೇನೆ. ನೀರಾವರಿ ಇಲಾಖೆ ಟೆಂಡರ್ನಲ್ಲಿ ₹2 ಸಾವಿರ ಕೋಟಿ ಕಿಕ್ ಬ್ಯಾಕ್ ಪಡೆದಿರುವ ಬಗ್ಗೆ ಬಿಜೆಪಿಯ ಎಚ್.ವಿಶ್ವನಾಥ ಅವರೇ ಆರೋಪಿಸಿದ್ದಾರೆ. ಇವು ನಾವು ಮಾಡಿದ ಆರೋಪಗಳಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>