‘ನಿಮ್ಮ ಜತೆ ಮುಷ್ಕರ ಮಾಡಿದವರು ಓಡಿ ಹೋಗಿದ್ದಾರೆ. ಇಂದು ಸರ್ಕಾರ ನಿಮ್ಮ ಸಹಾಯಕ್ಕೆ ನಿಂತಿದೆ. ಯಾವುದೇ ಸಮಸ್ಯೆಗಳು ಇದ್ದರೆ ಸರ್ಕಾರದ ಜತೆ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ. ಮುಖ್ಯಮಂತ್ರಿಯ ಸಲಹೆಯ ಮೇರೆಗೆ ಮರು ನೇಮಕ ಮಾಡಿಕೊಳ್ಳುತ್ತಿದ್ದೇವೆ. ಮುಂದೆ ಇಂತಹ ತಪ್ಪುಗಳನ್ನು ಮಾಡಲು ಹೋಗಬೇಡಿ. ಒಂದು ವೇಳೆ ಆ ರೀತಿ ಮಾಡಿದರೆ ನಿಮ್ಮ ನೆರವಿಗೆ ಬರುವುದಿಲ್ಲ. ಮುಂದಿನ ತಿಂಗಳಿಂದ ಸಮರ್ಪಕವಾಗಿ ವೇತನ ಪಾವತಿ ಮಾಡುತ್ತೇವೆ’ ಎಂದು ಶ್ರೀರಾಮುಲು ತಿಳಿಸಿದರು.