<p><strong>ತುಮಕೂರು</strong>: ‘ಆರೋಗ್ಯ ಇಲಾಖೆ ಸಿಬ್ಬಂದಿ ಭಾನುವಾರ ಕೆಲಸ ನಿರ್ವಹಿಸುವಂತೆ ಮಾಡಿ ಬೇರೆ ದಿನಗಳಲ್ಲಿ ರಜೆ ನೀಡುವ ಬಗ್ಗೆ ಚಿಂತನೆ ನಡೆದಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಭಾನುವಾರ ರಜೆ ಇರುವುದರಿಂದ ಚಿಕಿತ್ಸೆಗೆಂದು ಜನರು ಆಸ್ಪತ್ರೆಗಳಿಗೆ ಬರುತ್ತಾರೆ. ಆ ಸಮಯದಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿ ರಜೆಯಲ್ಲಿದ್ದರೆ ಚಿಕಿತ್ಸೆ ಸಿಗುವುದು ಕಷ್ಟಕರವಾಗುತ್ತದೆ. ಹಾಗಾಗಿ, ರಜಾ ದಿನ ಬದಲಿಸಿ ಭಾನುವಾರದ ಬದಲು ಬೇರೆ ದಿನ ರಜೆ ನೀಡುವ ಬಗ್ಗೆ ಚಿಂತನೆ ಮಾಡಲಾಗಿದೆ’ ಎಂದರು.</p>.<p>‘ಚಾಣಕ್ಯ ವಿ.ವಿ.ಗೆ ಜಮೀನು ನೀಡಿರುವುದಕ್ಕೆ ಕಾಂಗ್ರೆಸ್ನವರು ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಅವರು ಅಧಿಕಾರದಲ್ಲಿ ಇದ್ದಾಗ ಎಷ್ಟು ಶಿಕ್ಷಣ ಸಂಸ್ಥೆಗಳಿಗೆ ಜಮೀನು ಕೊಟ್ಟಿದ್ದಾರೆ ಎಂಬುದು ಗೊತ್ತಿದೆ’ ಎಂದು ಹೇಳಿದರು.</p>.<p>ಬೇರೆಯವರು ಶಿಕ್ಷಣ ಸಂಸ್ಥೆ ತೆರೆದರೆ ಭೂಮಿ ನೀಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ‘ಆರೋಗ್ಯ ಇಲಾಖೆ ಸಿಬ್ಬಂದಿ ಭಾನುವಾರ ಕೆಲಸ ನಿರ್ವಹಿಸುವಂತೆ ಮಾಡಿ ಬೇರೆ ದಿನಗಳಲ್ಲಿ ರಜೆ ನೀಡುವ ಬಗ್ಗೆ ಚಿಂತನೆ ನಡೆದಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಭಾನುವಾರ ರಜೆ ಇರುವುದರಿಂದ ಚಿಕಿತ್ಸೆಗೆಂದು ಜನರು ಆಸ್ಪತ್ರೆಗಳಿಗೆ ಬರುತ್ತಾರೆ. ಆ ಸಮಯದಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿ ರಜೆಯಲ್ಲಿದ್ದರೆ ಚಿಕಿತ್ಸೆ ಸಿಗುವುದು ಕಷ್ಟಕರವಾಗುತ್ತದೆ. ಹಾಗಾಗಿ, ರಜಾ ದಿನ ಬದಲಿಸಿ ಭಾನುವಾರದ ಬದಲು ಬೇರೆ ದಿನ ರಜೆ ನೀಡುವ ಬಗ್ಗೆ ಚಿಂತನೆ ಮಾಡಲಾಗಿದೆ’ ಎಂದರು.</p>.<p>‘ಚಾಣಕ್ಯ ವಿ.ವಿ.ಗೆ ಜಮೀನು ನೀಡಿರುವುದಕ್ಕೆ ಕಾಂಗ್ರೆಸ್ನವರು ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಅವರು ಅಧಿಕಾರದಲ್ಲಿ ಇದ್ದಾಗ ಎಷ್ಟು ಶಿಕ್ಷಣ ಸಂಸ್ಥೆಗಳಿಗೆ ಜಮೀನು ಕೊಟ್ಟಿದ್ದಾರೆ ಎಂಬುದು ಗೊತ್ತಿದೆ’ ಎಂದು ಹೇಳಿದರು.</p>.<p>ಬೇರೆಯವರು ಶಿಕ್ಷಣ ಸಂಸ್ಥೆ ತೆರೆದರೆ ಭೂಮಿ ನೀಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>