<p><strong>ಬೆಂಗಳೂರು: </strong>ರಾಜ್ಯದಲ್ಲಿ ಕೋವಿಡ್ ಕಾರಣಕ್ಕೆ ಲಾಕ್ಡೌನ್ ಅಥವಾ ಇನ್ನಷ್ಟು ಕಠಿಣ ನಿಯಮ ಜಾರಿಗೆ ತರುವ ಉದ್ದೇಶವಿಲ್ಲ. ವಾರಂತ್ಯ ಕರ್ಫ್ಯೂ ಮುಂದುವರಿಸಬೇಕೆ ಅಥವಾ ಸಡಿಲಗೊಳಿಸಬೇಕೇ ಎಂಬ ಬಗ್ಗೆ ಶುಕ್ರವಾರ ತುರ್ತುಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೋವಿಡ್ ಕುರಿತ ವರ್ಚುವಲ್ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.</p>.<p>ತಜ್ಞರ ಪ್ರಕಾರ ಇದೇ 25 ಅಥವಾ 26 ರ ಸುಮಾರಿಗೆ ಕೋವಿಡ್ ಪ್ರಕರಣಗಳು ತಾರಕಕ್ಕೆ ಹೋಗಿ ಬಳಿಕ ಇಳಿಕೆಯಾಗಬೇಕು. ಅದನ್ನು ನೋಡಿಕೊಂಡು ಮುಂದಿನ ತೀರ್ಮಾನ ಮಾಡಬೇಕಾಗಿದೆ. ಪ್ರಕರಣಗಳು ಇಳಿಕೆಯಾದರೆ ನಿಯಮಗಳನ್ನು ಸಡಿಲಿಸಲಾಗುವುದು ಎಂದರು.</p>.<p>ಬೆಂಗಳೂರು ಸೇರಿ ರಾಜ್ಯದ ಎಲ್ಲೆಡೆ ಶುಕ್ರವಾರದವರೆಗೆ ಶಾಲಾ–ಕಾಲೇಜುಗಳು ಯಥಾಸ್ಥಿತಿ ಮುಂದುವರೆಯಲಿವೆ. ಬಳಿಕ ಆ ಬಗ್ಗೆಯೂ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಕೋವಿಡ್ ಕಾರಣಕ್ಕೆ ಲಾಕ್ಡೌನ್ ಅಥವಾ ಇನ್ನಷ್ಟು ಕಠಿಣ ನಿಯಮ ಜಾರಿಗೆ ತರುವ ಉದ್ದೇಶವಿಲ್ಲ. ವಾರಂತ್ಯ ಕರ್ಫ್ಯೂ ಮುಂದುವರಿಸಬೇಕೆ ಅಥವಾ ಸಡಿಲಗೊಳಿಸಬೇಕೇ ಎಂಬ ಬಗ್ಗೆ ಶುಕ್ರವಾರ ತುರ್ತುಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೋವಿಡ್ ಕುರಿತ ವರ್ಚುವಲ್ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.</p>.<p>ತಜ್ಞರ ಪ್ರಕಾರ ಇದೇ 25 ಅಥವಾ 26 ರ ಸುಮಾರಿಗೆ ಕೋವಿಡ್ ಪ್ರಕರಣಗಳು ತಾರಕಕ್ಕೆ ಹೋಗಿ ಬಳಿಕ ಇಳಿಕೆಯಾಗಬೇಕು. ಅದನ್ನು ನೋಡಿಕೊಂಡು ಮುಂದಿನ ತೀರ್ಮಾನ ಮಾಡಬೇಕಾಗಿದೆ. ಪ್ರಕರಣಗಳು ಇಳಿಕೆಯಾದರೆ ನಿಯಮಗಳನ್ನು ಸಡಿಲಿಸಲಾಗುವುದು ಎಂದರು.</p>.<p>ಬೆಂಗಳೂರು ಸೇರಿ ರಾಜ್ಯದ ಎಲ್ಲೆಡೆ ಶುಕ್ರವಾರದವರೆಗೆ ಶಾಲಾ–ಕಾಲೇಜುಗಳು ಯಥಾಸ್ಥಿತಿ ಮುಂದುವರೆಯಲಿವೆ. ಬಳಿಕ ಆ ಬಗ್ಗೆಯೂ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>