ಕನಕಪುರದಲ್ಲಿ ಭಾನುವಾರ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಮೇಕೆದಾಟು ವಿಚಾರದಲ್ಲಿ ನಾವೇನು ಮಾಡುವ ಹಾಗಿಲ್ಲ. ಮಾತುಕತೆ ಮೂಲಕವೇ ಎರಡೂ ರಾಜ್ಯಗಳು ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವರು ಹೇಳಿರುವುದು ಖಂಡನೀಯ. ಕುಡಿಯುವ ನೀರಿನ ಯೋಜನೆಗೆ ಯಾರ ಅನುಮತಿಯೂ ಬೇಕಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ತಮಿಳುನಾಡಿನವರು ಈ ವಿಚಾರಕ್ಕೆ ರಾಜಕೀಯ ಮಾಡುತ್ತಲೇ ಬಂದಿದ್ದಾರೆ. ಅವರು ಇದಕ್ಕೆ ಒಪ್ಪುವುದೂ ಇಲ್ಲ ಎಂದರು.