<p><strong>ವಿಜಯಪುರ: </strong>ಸಚಿವ ಸ್ಥಾನ ಉಳಿಸಿಕೊಳ್ಳಲು ನಾನು ಯಾರ ಬಳಿಯೂ ಲಾಬಿ ಮಾಡಿಲ್ಲ. ಲಾಬಿ ಮಾಡುವ ಪ್ರಮೇಯವೇ ಬಂದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.</p>.<p>ಸಚಿವ ರಮೇಶ ಜಾರಕಿಹೊಳಿ ಅವರ ಮನೆಗೆ ಇತ್ತೀಚೆಗೆ ಭೇಟಿ ನೀಡಿರುವ ಕುರಿತು ಹರಿದಾಡುತ್ತಿರುವ ಊಹಾಪೂಹಗಳ ಕುರಿತು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಚಿವರ ಬಳಿ ಇಲಾಖೆಗೆ ಸಂಬಂಧಿಸಿದ ಕೆಲಸದ ಬಗ್ಗೆ ಚರ್ಚಿಸಲು ಭೇಟಿಯಾಗಿದ್ದೆ ಎಂದು ಹೇಳಿದರು.</p>.<p>ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಶಾಂತಿಯುತವಾಗಿ ನಡೆಯಬೇಕು. ಎಲ್ಲ ಮತದಾರರು ತಮ್ಮ ಹಕ್ಕು ಚಲಾಯಿಸಬೇಕು ಎಂದು ಜಿಲ್ಲೆಯ ಮತದಾರರಲ್ಲಿ ಮನವಿ ಮಾಡಿದರು.</p>.<p>ಕೋವಿಡ್, ಅತಿವೃಷ್ಟಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸವಾಲಾಗಿ ಸ್ವೀಕರಿಸಿ ಜನರಿಗೆ ನ್ಯಾಯ ಒದಗಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಎಲ್ಲ ಅಧಿಕಾರಿ, ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪರಿಣಾಮ ಜಿಲ್ಲೆಯಲ್ಲಿ ಕೋವಿಡ್ ದಿನದಿಂದ ದಿನಕ್ಕೆ ನಿಯಂತ್ರಣಕ್ಕೆ ಬರುತ್ತಿದ್ದು, ಸಮಾಧಾನದ ಸಂಗತಿ ಎಂದರು. </p>.<p>ಜಿಲ್ಲೆಯಲ್ಲಿ ಭೀಮಾ, ಡೋಣಿ ನದಿ ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರ ಪರಿಹಾರ ಒಗಿಸುವ ಕಾರ್ಯ ನಡೆದಿದೆ. ಕೇಂದ್ರ ಸರ್ಕಾರದ ಕಿಸಾನ್ ಸನ್ಮಾನ್ ಯೋಜನೆಯಡಿ ರೈತರ ಬ್ಯಾಂಕ್ ಅಕೌಂಟ್ಗೆ ಹಣ ಹಾಕಲಾಗುತ್ತಿದೆ ಎಂದು ಹೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಮಾಜಿ ಶಾಸಕ ಎಸ್.ಕೆ.ಬೆಳ್ಳುಬ್ಬಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಮುಖಂಡರಾದ ಶಿವರುದ್ರ ಬಾಗಲಕೋಟೆ, ಅಶೋಕ ಮಲ್ಲಾಪುರ, ವಿಜಯಕುಮಾರ ಜೋಶಿ ದಯಾ ಸಾಗರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ: </strong>ಸಚಿವ ಸ್ಥಾನ ಉಳಿಸಿಕೊಳ್ಳಲು ನಾನು ಯಾರ ಬಳಿಯೂ ಲಾಬಿ ಮಾಡಿಲ್ಲ. ಲಾಬಿ ಮಾಡುವ ಪ್ರಮೇಯವೇ ಬಂದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.</p>.<p>ಸಚಿವ ರಮೇಶ ಜಾರಕಿಹೊಳಿ ಅವರ ಮನೆಗೆ ಇತ್ತೀಚೆಗೆ ಭೇಟಿ ನೀಡಿರುವ ಕುರಿತು ಹರಿದಾಡುತ್ತಿರುವ ಊಹಾಪೂಹಗಳ ಕುರಿತು ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸಚಿವರ ಬಳಿ ಇಲಾಖೆಗೆ ಸಂಬಂಧಿಸಿದ ಕೆಲಸದ ಬಗ್ಗೆ ಚರ್ಚಿಸಲು ಭೇಟಿಯಾಗಿದ್ದೆ ಎಂದು ಹೇಳಿದರು.</p>.<p>ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಶಾಂತಿಯುತವಾಗಿ ನಡೆಯಬೇಕು. ಎಲ್ಲ ಮತದಾರರು ತಮ್ಮ ಹಕ್ಕು ಚಲಾಯಿಸಬೇಕು ಎಂದು ಜಿಲ್ಲೆಯ ಮತದಾರರಲ್ಲಿ ಮನವಿ ಮಾಡಿದರು.</p>.<p>ಕೋವಿಡ್, ಅತಿವೃಷ್ಟಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸವಾಲಾಗಿ ಸ್ವೀಕರಿಸಿ ಜನರಿಗೆ ನ್ಯಾಯ ಒದಗಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಎಲ್ಲ ಅಧಿಕಾರಿ, ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಪರಿಣಾಮ ಜಿಲ್ಲೆಯಲ್ಲಿ ಕೋವಿಡ್ ದಿನದಿಂದ ದಿನಕ್ಕೆ ನಿಯಂತ್ರಣಕ್ಕೆ ಬರುತ್ತಿದ್ದು, ಸಮಾಧಾನದ ಸಂಗತಿ ಎಂದರು. </p>.<p>ಜಿಲ್ಲೆಯಲ್ಲಿ ಭೀಮಾ, ಡೋಣಿ ನದಿ ಪ್ರವಾಹದಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರ ಪರಿಹಾರ ಒಗಿಸುವ ಕಾರ್ಯ ನಡೆದಿದೆ. ಕೇಂದ್ರ ಸರ್ಕಾರದ ಕಿಸಾನ್ ಸನ್ಮಾನ್ ಯೋಜನೆಯಡಿ ರೈತರ ಬ್ಯಾಂಕ್ ಅಕೌಂಟ್ಗೆ ಹಣ ಹಾಕಲಾಗುತ್ತಿದೆ ಎಂದು ಹೇಳಿದರು.</p>.<p>ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಮಾಜಿ ಶಾಸಕ ಎಸ್.ಕೆ.ಬೆಳ್ಳುಬ್ಬಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಮುಖಂಡರಾದ ಶಿವರುದ್ರ ಬಾಗಲಕೋಟೆ, ಅಶೋಕ ಮಲ್ಲಾಪುರ, ವಿಜಯಕುಮಾರ ಜೋಶಿ ದಯಾ ಸಾಗರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>